ಮನೆ ಕಾನೂನು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬೆಂಗಳೂರಿನ ನಾಲ್ಕು ಕಡೆ ಎನ್​ಐಎ ಅಧಿಕಾರಿಗಳ ದಾಳಿ- ದಾಖಲೆಗಳು ವಶಕ್ಕೆ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬೆಂಗಳೂರಿನ ನಾಲ್ಕು ಕಡೆ ಎನ್​ಐಎ ಅಧಿಕಾರಿಗಳ ದಾಳಿ- ದಾಖಲೆಗಳು ವಶಕ್ಕೆ

0

ಬೆಂಗಳೂರು: ಬೆಂಗಳೂರಿನ ವೈಟ್​ ಫೀಲ್ಡ್​​ ನಲ್ಲಿರುವ ರಾಮೇಶ್ವರಂ ಕೆಫೆ ಬಾಂಬ್​​​ ಸ್ಫೋಟ ಪ್ರಕರಣ ಸಂಬಂಧಿಸಿದಂತೆ ಬೆಂಗಳೂರಿನ ನಾಲ್ಕು ಕಡೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ದಾಳಿ ಮಾಡಿದ್ದಾರೆ.

Join Our Whatsapp Group


ರಾಮೇಶ್ವರಂ ಕೇಫೆಯಲ್ಲಿ ಬಾಂಬ್​​ ಸ್ಫೋಟಿಸಿದ್ದ ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ.
ಕಾರ್ಯಾಚರಣೆ ವೇಳೆ ಎನ್​ಐಎ ಅಧಿಕಾರಿಗಳು ಮಹತ್ವದ ದಾಖಲೆ ವಶಪಡಿಸಿಕೊಂಡಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳು ಕೊಯಮುತ್ತೂರು ಮತ್ತು ಬೆಂಗಳೂರು ಸೇರಿದಂತೆ 11 ಕಡೆ ದಾಳಿ ನಡೆಸಿದ್ದಾರೆ.

ಮೂಲಗಳ ಪ್ರಕಾರ ಎನ್‌ಐಎ ಅಧಿಕಾರಿಗಳು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಮತ್ತು ಬನಶಂಕರಿಯಲ್ಲಿ ದಾಳಿ ಮಾಡಿದ್ದಾರೆ. ಎನ್​ಐಎ ಕೊಯಮತ್ತೂರಿನ ವೈದ್ಯರಾದ ಜಾಫರ್ ಇಕ್ಬಾಲ್ ಮತ್ತು ನಯನ್ ಸಾದಿಕ್ ಮನೆಗಳ ಮೇಲೆ ದಾಳಿ ನಡೆಸಿದೆ.

ಮಾರ್ಚ್ 1 ರಂದು ಮಧ್ಯಾಹ್ನ 12:55 ರ ಸುಮಾರಿಗೆ ವೈಟ್​ಫೀಲ್ಡ್​ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಲಾಗಿತ್ತು. ಕೃತ್ಯ ಎಸಗಿದ ಆರೋಪಿಗಳಾದ ಮೊಹಮ್ಮದ್ ಮತೀನ್ ಮತ್ತು ಮುಸಾವಿರ್ ಹುಸೇನ್​ ಅನ್ನು ಎನ್​ಐಎ ಅಧಿಕಾರಿಗಳು, ಘಟನೆ ನಡೆದು  43 ದಿನಗಳ ಬಳಿಕ, ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದರು. ಬಂಧಿತರ ವಿಚಾರಣೆ ನಡೆಸಿದ್ದು ಬೆಚ್ಚಿ ಬೀಳಿಸುವ ಸಂಗತಿ ಬಯಲಾಗಿದ್ದವು.