ಮಂಡ್ಯ:ತಾಲೂಕಿನ ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜ ತೆರವುಗೊಳಿಸಿದ್ದ ವಿಚಾರ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿದ್ದು, ರಾಜಕೀಯ ತಿರುವು ಪಡೆದಿತ್ತು. ಇದೀಗ ಇದೇ ಸ್ಥಳದಲ್ಲಿ ಹಳೆಯ ತ್ರಿವರ್ಣ ಧ್ವಜ ತೆಗೆದು ಹೊಸ ಧ್ವಜವನ್ನು ಹಾರಿಸಲಾಗಿದೆ.
ಗ್ರಾಮದಲ್ಲಿನ 108 ಅಡಿಯ ಅರ್ಜುನ ಸ್ತಂಭದಲ್ಲಿದ್ದ ಹನುಮ ಧ್ವಜವನ್ನು ತೆರವುಗೊಳಿಸಿ ಸರ್ಕಾರ ತ್ರಿವರ್ಣ ಧ್ವಜ ಹಾರಿಸಿದೆ. ಹನುಮ ಧ್ವಜ ತೆರವುಗೊಳಿಸಿದ್ದಕ್ಕೆ ಗ್ರಾಮಸ್ಥರು, ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ, ಕೆರಗೋಡು ಅರ್ಜುನ ಸ್ತಂಭದಲ್ಲಿದ್ದ ಹಳೆ ತ್ರಿವರ್ಣ ಧ್ವಜ ತೆಗೆದು ಹೊಸ ಧ್ವಜ ಹಾರಿಸಲಾಗಿದೆ.
ಜಿಲ್ಲಾಡಳಿತ ಮಂಗಳವಾರ ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಹಳೆ ಧ್ವಜ ಇಳಿಸಿ ಹೊಸ ಬಾವುಟವನ್ನು ಹಾರಿಸಿದೆ.ಮುಂಜಾನೆ ಕೆರಗೋಡು ಗ್ರಾಮಕ್ಕೆ ಬಂದ ಪೊಲೀಸರು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತೆ ಕೈಗೊಂಡರು. ಬಳಿಕ 6:45ರ ವೇಳೆಯಲ್ಲಿ ಹಳೆಯ ರಾಷ್ಟ್ರ ಧ್ವಜ ಇಳಿಸಿ ಎಡಿಸಿ ನಾಗರಾಜ್ ಅವರು ಹೊಸ ಧ್ವಜಾರೋಹಣ ಮಾಡಿದರು.
ಧ್ವಜಾರೋಹಣ ಬಳಿಕ ಮಾತನಾಡಿದ ಅವರು ಕೆರಗೋಡು ಗ್ರಾಮದಲ್ಲಿ ಹಿಂದೆ ರಾಷ್ಟ್ರ ಧ್ವಜ ಹಾರಿಸಲಾಗಿತ್ತು.ಗಾಳಿಗೆ ಧ್ವಜ ಗಂಟಾಗಿ ಸರಿಯಾದ ರೀತಿಯಲ್ಲಿ ಹಾರುತ್ತಿರಲಿಲ್ಲ.ಹೀಗಾಗಿ ಹಳೆಯ ಧ್ವಜ ಬದಲಿಸಿ ಹೊಸ ಧ್ವಜ ಹಾರಿಸಲಾಗಿದೆ.ಹಿಂದೆ ಇದ್ದ ಧ್ವಜದ ಅಳತೆಯಲ್ಲೇ, ಈಗ ಹೊಸ ರಾಷ್ಟ್ರ ಧ್ವಜ ಹಾಕಲಾಗಿದೆಮುಂದಿನ ದಿನಗಳಲ್ಲಿ ದೊಡ್ಡ ರಾಷ್ಟ್ರ ಧ್ವಜ ಹಾರಿಸುತ್ತೇವೆ ಎಂದರು.
ಜಿಲ್ಲಾಡಳಿತದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು,ಇಷ್ಟು ದೊಡ್ಡ ಧ್ವಜ ಸ್ತಂಭಕ್ಕೆ ಚಿಕ್ಕ ರಾಷ್ಟ್ರ ಧ್ವಜ ಸಲ್ಲದು. ಜಿಲ್ಲಾಡಳಿತ ಹಾರಿಸಿದ ರಾಷ್ಟ್ರಧ್ವಜ ಅಸಮಾಧಾನ ತಂದಿದೆ. ದೊಡ್ಡ ರಾಷ್ಟ್ರ ಧ್ವಜ ಹಾರಿಸುವಂತೆ ಅಧಿಕಾರಿಗಳಿಗೂ ಮನವಿ ಮಾಡಿದ್ದೇವೆ.ತರಾತುರಿಯಾಗಿ ಹೊಸ ಧ್ವಜ ಹಾರಿಸಿದ್ದಾರೆ. ನಮ್ಮ ಧ್ವಜ ಹೋರಾಟ ಇಲ್ಲಿಗೆ ನಿಲ್ಲಲ್ಲ. ಜೂ.4ರ ನಂತರ ಹನುಮ ಧ್ವಜ ಹೋರಾಟ ತೀವ್ರವಾಗಲಿದೆ. ಹೋರಾಟದ ಪರಿಣಾಮ ಸರ್ಕಾರ ಎದುರಿಸಲಿದೆ. ಮತ್ತೆ ಅರ್ಜುನ ಸ್ತಂಭದಲ್ಲಿ ಹನುಮ ಧ್ವಜ ಹಾರಾಡಬೇಕು.ರಾಷ್ಟ್ರೀಯ ಹಬ್ಬದ ಸಂಧರ್ಭದಲ್ಲಿ ರಾಷ್ಟ್ರಧ್ವಜ ಹಾರಾಡಲು ಅಭ್ಯಂತರವಿಲ್ಲ. ಆದರೆ ಅರ್ಜುನ ಸ್ತಂಭ ನಿರ್ಮಾಣದ ಉದ್ದೇಶ ಹನುಮ ಧ್ವಜ ಹಾರಿಸುವುದು.ಹಾಗಾಗಿ ಮತ್ತೆ ಅರ್ಜುನ ಸ್ತಂಭದಲ್ಲಿ ಹನುಮ ಧ್ವಜ ಹಾರಾಡಬೇಕು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.