ಮನೆ ಅಪರಾಧ ಇನ್ಸ್ ​ಪೆಕ್ಟರ್, ಎಸಿಪಿಗೆ ಕೊಲೆ‌ ಬೆದರಿಕೆ ಹಾಕಿದ ಪೊಲೀಸ್​ ಪೇದೆ

ಇನ್ಸ್ ​ಪೆಕ್ಟರ್, ಎಸಿಪಿಗೆ ಕೊಲೆ‌ ಬೆದರಿಕೆ ಹಾಕಿದ ಪೊಲೀಸ್​ ಪೇದೆ

0

ಬೆಂಗಳೂರು: ಅಮಾನತು ಶಿಕ್ಷೆಗೆ ಶಿಫಾರಸು ಮಾಡಿದರು ಅಂತ ಬಾಣಸವಾಡಿ ಠಾಣೆಯ ಇನ್ಸ್ ​ಪೆಕ್ಟರ್ ಮತ್ತು ಎಸಿಪಿ ಅವರಿಗೆ ಪೊಲೀಸ್​ ಪೇದೆ ಚಾಕುವಿನಿಂದ ಇರಿದು ಕೊಲೆ‌ ಮಾಡೋದಾಗಿ ಜೀವ ಬೆದರಿಕೆ ಹಾಕಿದ್ದಾರೆ.

Join Our Whatsapp Group

ರೇಣುಕಾ ನಾಯಕ್ ಜೀವ ಬೆದರಿಕೆ ಹಾಕಿದ ಪೊಲೀಸ್​ ಪೇದೆ.

ಕೆಲ ದಿನಗಳ ಹಿಂದೆ ಬೆಂಗಳೂರಿನ ಬಾಣಸವಾಡಿ ವ್ಯಾಪ್ತಿಯ ರೌಡಿಶೀಟರ್ ಕಾರ್ತಿಕೇಯನ್ ಹತ್ಯೆಯಾಗಿತ್ತು. ಈ ಕೃತ್ಯದಲ್ಲಿ ಕರ್ತವ್ಯಲೋಪ ಎಸಗಿರುವ ಆರೋಪದ ಮೇಲೆ ಪೊಲೀಸ್​ ಪೇದೆಗಳಾದ ಸಂತೋಷ್, ಪುಟ್ಟಸ್ವಾಮಿ, ವಿನೋದ್​ ಅವರನ್ನು ಪೂರ್ವವಿಭಾಗದ ಡಿಸಿಪಿ ಕುಲದೀಪ್​ ಕುಮಾರ್ ಆರ್​. ಜೈನ್​ ಅಮಾನತುಗೊಳಿಸಿದ್ದರು.

ಪೊಲೀಸ್​ ಪೇದೆ ರೇಣುಕಾ ನಾಯಕ್ ಅವರನ್ನೂ ಅಮಾನತು ಮಾಡುವಂತೆ ಶಿಫಾರಸು ಮಾಡಲಾಗಿತ್ತು. ತನ್ನ ಹೆಸರನ್ನು ಅಮಾನತು ಶಿಕ್ಷೆಗೆ ಶಿಫಾರಸು ಮಾಡಿದ ಕಾರಣಕ್ಕೆ ಬಾಣಸವಾಡಿ ಉಪ ವಿಭಾಗದ ಎಸಿಪಿ ಹಾಗೂ ಇನ್ಸ್​ಪೆಕ್ಟರ್​ ಅವರಿಗೆ ಪೇದೆ ರೇಣುಕಾ ನಾಯಕ್​ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಆತಂಕಗೊಂಡ ಎಸಿಪಿ ಅವರು, ಕೊನೆ ಕ್ಷಣದಲ್ಲಿ ತಮ್ಮ ಶಿಫಾರಸು ಹಿಂಪಡೆದು. ಒಂದು ತಿಂಗಳು ರಜೆ ಕೊಟ್ಟು ಕಳಿಸಿದ್ದಾರೆ.

ಈ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಿ ನಗರ ಪೊಲೀಸ್​ ಆಯುಕ್ತ ಬಿ. ​ದಯಾನಂದ್ ಆದೇಶ ಹೊರಡಿಸಿದ್ದಾರೆ.