ಬೆಂಗಳೂರು : ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ಫೋಟೋ, ವಿಡಿಯೋಗಳನ್ನು ಹಂಚಿಕೆ ಮಾಡಿದ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ನಾಲ್ವರು ಆರೋಪಿಗಳು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಪ್ರಕರಣದ ಆರೋಪಿಗಳಾದ ನವೀನ್ ಗೌಡ ಅಲಿಯಾಸ್ ಎನ್.ಆರ್.ನವೀನ್ ಕುಮಾರ್, ಎನ್.ಕಾರ್ತಿಕ್, ಬಿ.ಸಿ. ಚೇನತ್ ಕುಮಾರ್ ಮತ್ತು ಎಚ್.ವಿ.ಪುಟ್ಟರಾಜು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ಗೆ ಪ್ರತ್ಯೇಕ ಕ್ರಿಮಿನಲ್ ಅರ್ಜಿಸಲ್ಲಿಸಿದ್ದಾರೆ.
ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಹಾಗೂ ಬಿಜೆಪಿ ಚುನಾವಣಾ ಏಜೆಂಟ್ ಆಗಿದ್ದ ಎಂ.ಜಿ.ಪೂರ್ಣಚಂದ್ರ ತೇಜಸ್ವಿ, ಹಾಸನ ಸಿಇಎನ್ ಪೊಲೀಸ್ ಠಾಣೆಗೆ ೨೦೨೪ರ ಎ.೨೩ರಂದು ದೂರು ನೀಡಿದ್ದರು. ಇದರಿಂದ ಬಂಧನ ಭೀತಿ ಎದುರಾದ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು ನಿರೀಕ್ಷಣಾ ಜಾಮೀನು ಕೋರಿ ಹಾಸನದ ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದನ್ನು ವಜಾಗೊಳಿಸಿ ನ್ಯಾಯಾಲಯವು ಮೇ.೮ರಂದು ಆದೇಶಿಸಿತ್ತು. ಹಾಗಾಗಿ, ಈ ನಾಲ್ವರು ಆರೋಪಿಗಳು ಹೈಕೊರ್ಟ್ ಮೊರೆ ಹೋಗಿದ್ದರು.
ಸವಾಲ್ ನ್ಯೂಸ್ ಪ್ರಚಲಿತ ಸುದ್ದಿಗಳು…..
ಚಿನ್ನದ ನಿರೀಕ್ಷೆಯಲ್ಲಿದ್ದ ವಿನೇಶ್ ಫೋಗಟ್ ಅನರ್ಹ
ಆಂಗ್ಲ ಭಾಷಾ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನಆಂಗ್ಲ ಭಾಷಾ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ
MYMUL ನೂತನ ಅದ್ಯಕ್ಷರಾಗಿ ಚೆಲುವರಾಜು ರವರು ಆಯ್ಕೆ
ಬಾಂಗ್ಲಾದೇಶ ಸಂಸತ್ತಿಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು
ಸವಾಲ್ ನ್ಯೂಸ್ ಪ್ರಚಲಿತ ಸುದ್ದಿಗಳು…..
ಸವಾಲ್ ನ್ಯೂಸ್ ಪ್ರಚಲಿತ ಸುದ್ದಿಗಳು…..
ಸವಾಲ್ ನ್ಯೂಸ್ ಪ್ರಚಲಿತ ಸುದ್ದಿಗಳು…..
ಸವಾಲ್ ನ್ಯೂಸ್ ಪ್ರಚಲಿತ ಸುದ್ದಿಗಳು…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.