ರಾಮನಗರ: ಐಸ್ ಕ್ರೀಂ ಸವಿದ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆ ಚನ್ನಪಟ್ಟಣ ತಾಲೂಕಿನ ಸಾತನೂರು ಬಳಿ ನಡೆದಿದೆ.
ಸಾತನೂರು ವೃತ್ತದ ಬಳಿಯ ಪಾರ್ಟಿ ಹಾಲ್ ನಲ್ಲಿ ಇತ್ತೀಚೆಗೆ ನಡೆದಿದ್ದ ಮದುವೆಯಲ್ಲಿ ಊಟ ಮಾಡಿ, ನಾಲ್ಕೈದು ತಾಸುಗಳ ಬಳಿಕ ಚನ್ನಪಟ್ಟಣ ಮತ್ತು ಮಾಗಡಿಯಲ್ಲಿ 100ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದರು.
ಆಹಾರ ಸುರಕ್ಷತಾ ಅಧಿಕಾರಿಗಳು ಸಂಗ್ರಹಿಸಿದ್ದ ಆಹಾರದ ಮಾದರಿಯ ವರದಿ ಬಂದಿದ್ದು, ಘಟನೆಗೆ ಐಸ್ ಕ್ರೀಂ ಸೇವನೆ ಕಾರಣ ಎಂಬ ಮಾಹಿತಿ ಹೊರಬಿದ್ದಿದೆ. ಚನ್ನಪಟ್ಟಣದ ಮಿಲನ ಪಾರ್ಟಿ ಹಾಲ್ನಲ್ಲಿ ಮೇ 5ರಂದು ಘಟನೆ ನಡೆದಿತ್ತು. ಅಸ್ವಸ್ಥರಿಗೆ ಚನ್ನಪಟ್ಟಣ, ರಾಮನಗರ ಹಾಗೂ ಮಾಗಡಿಯಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳು, ಮದುವೆಗೆ ಬಂದವರು ಸೇವಿಸಿದ್ದ ಆಹಾರ ಮತ್ತು ಐಸ್ ಕ್ರೀಂ ಮಾದರಿಯನ್ನು ಸಂಗ್ರಹಿಸಿದ್ದರು. ಮದುವೆಯಲ್ಲಿ ಊಟದ ಬಳಿಕ ನೀಡಲಾಗಿದ್ದ ಐಸ್ ಕ್ರೀಂ ಸುರಕ್ಷತೆಗೆ ಅನುಗುಣವಾಗಿಲ್ಲ. ಜೊತೆಗೆ ಅದನ್ನು ತಯಾರಿಸಿದ ಜಾಗದಲ್ಲಿ ನೈರ್ಮಲ್ಯ ಕೊರತೆ ಇದ್ದಿದ್ದರಿಂದ ಐಸ್ ಕ್ರೀಂ ಕಲುಷಿತವಾಗಿರುವುದು ವರದಿಯಲ್ಲಿ ಪತ್ತೆಯಾಗಿದೆ.
ಹಾಗಾಗಿ, ಐಸ್ ಕ್ರೀಂ ತಯಾರಿಸಿದ ಕಂಪನಿಗೆ ನೋಟಿಸ್ ನೀಡಿ, ಬೀಗ ಜಡಿಸಿ ಮತ್ತೊಮ್ಮೆ ಪರಿಶೀಲನೆ ನಡೆಸಲಾಗುವುದು. ಅಲ್ಲದೇ, ಪಾರ್ಟಿ ಹಾಲ್ನಲ್ಲೂ ನೈರ್ಮಲ್ಯದ ಕೊರತೆ ಇದ್ದು, ಅದರ ಮಾಲೀಕರಿಗೂ ನೋಟಿಸ್ ನೀಡಲಾಗುವುದು ಎಂದು ಇಲಾಖೆ ಮೂಲಗಳು ಮಾಹಿತಿ ನೀಡಿವೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.