ತಮಿಳುನಾಡು: ಸೆಪ್ಟಿಕ್ ಟ್ಯಾಂಕ್ ನಲ್ಲಿ 9 ವರ್ಷದ ಬಾಲಕನ ಶವ ಪತ್ತೆಯಾಗಿದ್ದು, ಈ ಘಟನೆ ಸಂಬಂಧ ಅಪ್ರಾಪ್ತ ಬಾಲಕನನ್ನು ಬಂಧಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ತಮಿಳುನಾಡಿನ ಮದುರೈನಲ್ಲಿ ಉರ್ದು ಪ್ರಚಾರ ಸಂಸ್ಥೆಯಲ್ಲಿ ಓದುತ್ತಿದ್ದ 9 ವರ್ಷದ ಬಾಲಕನನ್ನು ಹತ್ಯೆ ಮಾಡಲಾಗಿದ್ದು, ಆತನ ಶವವನ್ನು ಸೆಪ್ಟಿಕ್ ಟ್ಯಾಂಕ್ ನಿಂದ ಹೊರತೆಗೆಯಲಾಗಿದೆ.
ಬಾಲಕ ಬಿಹಾರ ಮೂಲದವರಾಗಿದ್ದು, ಇತರ 11 ವಿದ್ಯಾರ್ಥಿಗಳೊಂದಿಗೆ ಸಂಸ್ಥೆಯಲ್ಲಿ ಓದುತ್ತಿದ್ದ. ಮಧುರೈನ ಕಥಾಪಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಒಂಬತ್ತು ವರ್ಷದ ಬಾಲಕ ನಾಪತ್ತೆಯಾಗಿದ್ದ ಕಾರಣ ಸಂಸ್ಥೆಯ ವಾರ್ಡನ್ ಶನಿವಾರ (ಮೇ 25) ಪೊಲೀಸರಿಗೆ ದೂರು ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ.
ಪೊಲೀಸರು ಕೂಡಲೇ ತನಿಖೆಯನ್ನು ಪ್ರಾರಂಭಿಸಿದರು, ಎಲ್ಲೆಡೆ ಹುಡುಕಾಡಿದಾಗ ಸೆಪ್ಟೆಕ್ ಟ್ಯಾಂಕ್ ನಲ್ಲಿ ಮೊದಲು ತಲೆ ಕಾಣಿಸಿತ್ತು, ಬಳಿಕ ದೇಹವನ್ನು ಹೊರತೆಗೆಯಲಾಗಿದೆ. ಹೊಟ್ಟೆ ಸೇರಿದಂತೆ ದೇಹದ ಇತರೆ ಭಾಗಗಳಲ್ಲಿ ಇರಿತದ ಗಾಯಗಳಿದ್ದವು.
ಪೊಲೀಸ್ ಮೂಲಗಳ ಪ್ರಕಾರ, 9 ವರ್ಷದ ಬಾಲಕ 13 ವರ್ಷದ ಬಾಲಕನೊಂದಿಗೆ ಜಗಳವಾಡಿದ್ದ, ಅವನು ಕೂಡ ಇನ್ಸ್ಟಿಟ್ಯೂಟ್ ನ ವಿದ್ಯಾರ್ಥಿಯಾಗಿದ್ದ, 13 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಆ ಬಾಲಕನೇ ಹತ್ಯೆ ಮಾಡಿದ್ದಾನೆ ಎಂಬುದರ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.