ಮನೆ ಅಪರಾಧ ಸರ್ಕಾರಿ ಬಸ್ – ಬೈಕ್ ನಡುವೆ ಅಪಘಾತ: ಬಿತ್ತನೆ ಬೀಜ ಖರೀದಿಸಲು ಬಂದಿದ್ದ ರೈತರಿಬ್ಬರು ಸ್ಥಳದಲ್ಲೇ...

ಸರ್ಕಾರಿ ಬಸ್ – ಬೈಕ್ ನಡುವೆ ಅಪಘಾತ: ಬಿತ್ತನೆ ಬೀಜ ಖರೀದಿಸಲು ಬಂದಿದ್ದ ರೈತರಿಬ್ಬರು ಸ್ಥಳದಲ್ಲೇ ಸಾವು

0

ಗದಗ: ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ರೈತರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದಲ್ಲಿ ನಡೆದಿದೆ.

Join Our Whatsapp Group

ಮೃತರನ್ನು ಹಳ್ಳಿಗುಡಿ ಗ್ರಾಮದ ರೈತ ಪರಸಪ್ಪ ಜೋಗಿನ ಹಾಗೂ ಪೇಠಾಲೂರ ಗ್ರಾಮದ ಮಾರುತಿ ಯಾಟಿ ಎಂದು ಗುರುತಿಸಲಾಗಿದೆ.

ಬಿತ್ತನೆ ಬೀಜ ಖರೀದಿಗಾಗಿ ಇಬ್ಬರು ರೈತರು ಮುಂಡರಗಿಗೆ ಬಂದಿದ್ದರು ಖರೀದಿ ಮುಗಿಸಿ ತಮ್ಮ ಊರಿನತ್ತ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕೊಪ್ಪಳ ದಿಂದ ಗದಗ ಕಡೆಗೆ ಬರುತ್ತಿದ್ದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ ಪರಿಣಾಮ ಇಬ್ಬರು ರೈತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.