ಪಾಂಡವಪುರ:ಪಟ್ಟಣದ ಪ್ರತಿಯೊಂದು ವಾರ್ಡ್ಗಳ ಸ್ವಚ್ಚತೆ ನಿರ್ವಹಿಸುವಲ್ಲಿ ಪುರಸಭೆ ಆರೋಗ್ಯಾಧಿಕಾರಿಗಳು ವಿಫಲರಾಗಿದ್ದು,ಅಧಿಕಾರಿಗಳ ಕಾರ್ಯವೈಖರಿಯಿಂದ ಸದಸ್ಯರು ಮತದಾರರ ಬಳಿ ಮಾತು ಕೇಳಬೇಕಿದೆ. ಕರ್ತವ್ಯ ಲೋಪ ಎಸಗುತ್ತಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ವಹಿಸಬೇಕೆಂದು ಪುರಸಭೆ ಸದಸ್ಯರು ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಹಾಜರಾಗಿರುವ ಪೌರಕಾರ್ಮಿಕರು ಪಟ್ಟಣದ ಯಾವ್ಯಾವ ವಾರ್ಡ್ಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದರೆ ಎಂಬುದರ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಹಿರಿಯ ಆರೋಗ್ಯಾಧಿಕಾರಿ ಬಸವರಾಜು, ಕಿರಿಯ ಆರೋಗ್ಯಾಧಿಕಾರಿ ನಿಂಗೇಗೌಡ, ಮೇಸ್ತಿç ಸುಬ್ರಹ್ಮಣ್ಯ ಹಾಗೂ ಉಸ್ತುವಾರಿ ರಮೇಶ್ ಅವರೊಡನೆ ಪಟ್ಟಣದ ಪ್ರತಿ ವಾರ್ಡ್ಗಳಿಗೂ ತೆರಳಿ ಕೆಲಸ ನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಮಾಹಿತಿ ಪಡೆದ ಬಳಿಕ ಪುರಸಭೆ ಮುಖ್ಯಾಧಿಕಾರಿ ವೀಣಾ ಅವರ ಬಳಿಗೆ ತೆರಳಿ ಆರೋಗ್ಯಾಧಿಕಾರಿಗಳ ಕರ್ತವ್ಯ ನಿಷ್ಠೆಯ ಬಗ್ಗೆ ಪುರಸಭೆ ಸದಸ್ಯರು ಸೋಮವಾರ ಪ್ರಶ್ನೆ ಮಾಡಿದರು.
ಪುರಸಭೆ ವ್ಯಾಪ್ತಿಯ ವಾರ್ಡ್ಗಳ ಸ್ವಚ್ಚತೆಗಾಗಿ ೩೩ ಪೌರ ಕಾರ್ಮಿಕರು ನೇಮಕವಾಗಿದ್ದಾರೆ. ಈ ಪೈಕಿ ಪ್ರತಿನಿತ್ಯ ಐದರಿಂದ ಆರು ನೌಕರರು ಅನ್ಯ ಕಾರಣಗಳಿಂದಾಗಿ ಗೈರು ಹಾಜರಿ ಆಗುತ್ತಿದ್ದರೆ. ಉಳಿದ ನೌಕರರನ್ನು ಸಮರ್ಥವಾಗಿ ಬಳಿಸಿಕೊಂಡು ಸ್ವಚ್ಚತೆ ಕಾಪಾಡುವಲ್ಲಿ ಪುರಸಭೆ ಆರೋಗ್ಯಾಧಿಕಾರಿಗಳು ವಿಫಲರಾಗಿದ್ದಾರೆ. ಸೋಮಾವಾರ ಮೇ.೨೭ ರಂದು ಹಾಜರಾತಿ ಪುಸ್ತಕದಲ್ಲಿ ೨೬ ಪೌರ ಕಾರ್ಮಿಕರು ಕೆಲಸಕ್ಕೆ ಹಾಜರಾಗಿದ್ದಾರೆ ಎಂದು ಹಾಜರಾತಿ ಪುಸ್ತಕದಲ್ಲಿ ನಮೂದಾಗಿದೆ. ಆದರೆ ಈ ಬಗ್ಗೆ ಆರೋಗ್ಯಾಧಿಕಾರಿಗಳ ಜತೆಯಲ್ಲೇ ತೆರಳಿ ಪರಶೀಲನೆ ನಡೆಸಿದ್ದಾಗ ಕೇವಲ ೧೯ ಕಾರ್ಮಿಕರು ಮಾತ್ರ ಕೆಲಸ ನಿರ್ವಹಿಸುತ್ತಿರುವುದು ಪಾತ್ಯ್ಯಕ್ಷತೆಯಿಂದ ತಿಳಿದು ಬಂದಿದೆ. ಕೆಲಸಕ್ಕೆ ಬಾರದ ಕಾರ್ಮಿಕರಿಗೂ ಕೂಡ ಯಾವ ಕಾರಣಕ್ಕಾಗಿ ಹಾಜರಾತಿ ನೀಡಲಾಗಿದೆ ಎಂಬುದನ್ನು ಪುರಸಭೆ ಮುಖ್ಯಾಧಿಕಾರಿಗಳು ತಿಳಿಸಬೇಕು ಎಂದು ಸದಸ್ಯರು ಪಟ್ಟು ಹಿಡಿದರು.
ಪುರಸಭೆ ಮುಖ್ಯಾಧಿಕಾರಿ ಸದದಸ್ಯರ ಪ್ರಶ್ನೆಗಳಿಗೆ ಉತ್ತರ ನೀಡಿ ಮಾತನಾಡಿ, ಇರುವ ೩೩ ಪೌರ ಕಾರ್ಮಿಕರಲ್ಲಿ ಆರೋಗ್ಯದ ಸಮಸ್ಯೆಯಿಂದ ಪ್ರತಿನಿತ್ಯ ಐದಾರು ಕಾರ್ಮಿಕರು ಗೈರು ಹಾಜರಾಗುತ್ತಿದ್ದಾರೆ. ಗೈರಾದ ಕಾರ್ಮಿಕರಿಗೆ ಸಂಬಳವನ್ನು ಕೂಡ ಮಾಡುತ್ತಿಲ್ಲ. ಪಟ್ಟಣ ಸ್ವಚ್ಚತೆ ವಿಚಾರದಲ್ಲಿ ಪುರಸಭೆ ಸದಸ್ಯರು ಕೈ ಹಾಕದಿದ್ದರೆ ಅಧಿಕಾರಿಗಳು ಜವಬ್ದಾರಿಯುತವಾಗಿ ಕೆಲಸ ನಿರ್ವಹಿಸಿ ಸಮಸ್ಯೆ ಬಾರದಂತೆ ಕೆಲಸ ನಿರ್ವಹಿಸುತ್ತಾರೆ. ಇಲ್ಲಿ ನಾವು ಹೇಳಿದಂತೆ ಯಾವುದೇ ಕೆಲಸ ಕಾರ್ಯಗಳು ಆಗುತ್ತಿಲ್ಲ. ಪುರಸಭೆ ಸದಸ್ಯರು ತಮ್ಮಿಷ್ಟ ಬಂದಂತೆ ಪೌರ ಕಾರ್ಮಿಕರನ್ನು ತಮ್ಮ ತಮ್ಮ ವಾರ್ಡ್ಗಳಿಗೆ ಕರೆದುಕೊಂಡು ಹೋಗುವುದ್ದರಿಂದ ಸಮಸ್ಯೆ ಉಲ್ಬಣವಾಗುತ್ತಿದೆ. ಅಧಿಕಾರಿಗಳ ಜವಬ್ದಾರಿಗೆ ಬಿಟ್ಟರೆ ಎಲ್ಲವೂ ಅಚ್ಚುಕಟ್ಟಾಗಿ ನಡೆಯುತ್ತದೆ. ಆರೋಗ್ಯಾಧಿಕಾರಿಗಳು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ ಎಂಬುದು ಅರಿವಿಗೆ ಬಂದಿದೆ. ಸದಸ್ಯರು ಅಧಿಕಾರಿಗಳೊಂದಿಗೆ ಕೈಜೋಡಿಸಿದರೆ ಸಮಸ್ಯೆ ಬರುವುದಿಲ್ಲ.ಎಲ್ಲರು ಸಹಕಾರಿಸುವಂತೆ ಮನವಿ ಮಾಡಿದರು.
ಹಿರಿಯ ಆರೋಗ್ಯಾಧಿಕಾರಿ ಬಸವರಾಜು, ಕಿರಿಯ ಆರೋಗ್ಯಾಧಿಕಾರಿ ನಿಂಗೇಗೌಡ, ಪೌರಕಾರ್ಮಿಕರ ಮೇಸ್ತ್ರೀ ಸುಬ್ರಹ್ಮಣ್ಯ ಹಾಗೂ ಮೇಲ್ವಿಚಾರಕ ಬೀರಶೆಟ್ಟಹಳ್ಳಿ ರಮೇಶ್ ಅವರ ವಿರುದ್ದ ಕರ್ತವ್ಯ ಲೋಪದ ವಿರುದ್ಧ ಕ್ರಮ ಕೈಗೊಳ್ಳುವಂತೆ ಇದೇ ವೇಳೆ ಪುರಸಭೆ ಸದಸ್ಯರು ಮುಖ್ಯಾಧಿಕಾರಿ ವೀಣಾ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಪುರಸಭೆ ಸದಸ್ಯರಾದ ಪಾರ್ಥಸಾರಥಿ, ಶಿವಕುಮಾರ್, ಚಂದ್ರು, ಜೆಡಿಎಸ್ ಮುಖಂಡರಾದ ಹಾರೋಹಳ್ಳಿ ಉಮೇಶ್, ಜಯರಾಮು,ಆರ್ಮುಗಂ ಇತರರು ಇದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.