ನಕಲಿ ದಾಖಲೆ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂಬ ಬಗ್ಗೆ ಆರೋಪಗಳಿದ್ದರೆ ಬಾಧಿತ ಖಾಸಗಿ ವ್ಯಕ್ತಿಗಳೂ ಪೊಲೀಸ್ ಠಾಣೆ ಅಥವಾ ನ್ಯಾಯಾಲಯದಲ್ಲಿ ಕ್ರಿಮಿನಲ್ ದೂರು ದಾಖಲಿಸಲು ಅವಕಾಶವಿದೆ ಎಂದು ಕರ್ನಾಟಕ ಹೈಕೋರ್ಟ್ ಈಚೆಗೆ ಸ್ಪಷ್ಟಪಡಿಸಿದೆ.
ಸಿವಿಲ್ ದಾವೆಯೊಂದಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ತಾಲ್ಲೂಕಿನ ನಿವಾಸಿ ವಾಸಂತಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠವು ವಜಾ ಮಾಡಿದೆ.
ಅರ್ಜಿದಾರೆ ಪರ ವಕೀಲ ಸಂಕೇತ್ ಏಣಗಿ ಅವರು “ನಕಲಿ ದಾಖಲೆಗಳ ವಿಚಾರದಲ್ಲಿ ನ್ಯಾಯಾಲಯಗಳು ಮಾತ್ರವೇ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಬಹುದೇ ಹೊರತು ಖಾಸಗಿ ವ್ಯಕ್ತಿಗಳಲ್ಲ. ಈ ಪ್ರಕರಣದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಉಮೇಶ್ಗೆ ಅಧಿಕಾರ ಇಲ್ಲ. ಇಷ್ಟಕ್ಕೂ 2019ರಲ್ಲಿಯೇ ನಾನು ವಿಚಾರಣಾಧೀನ ನ್ಯಾಯಾಲಯದಲ್ಲಿ ಹೂಡಿದ್ದ ದಾವೆ ವಾಪಸ್ ಪಡೆದಿದ್ದೇನೆ ಎಂದು ವಾದಿಸಿದ್ದರು.
ಪ್ರತಿವಾದಿ ಪರ ವಕೀಲ ಕರಣ್ ಅವರು “ತಮ್ಮ ವಿರುದ್ಧ ಅರ್ಜಿದಾರೆ ನಕಲಿ ದಾಖಲೆ ಬಳಕೆ ಮಾಡಿರುವುದರಿಂದ ದೂರು ದಾಖಲಿಸುವುದು ಅನಿವಾರ್ಯವಾಯಿತು” ಎಂದಿದ್ದರು.
ಪ್ರಕರಣದ ಹಿನ್ನೆಲೆ: ತೀರ್ಥಹಳ್ಳಿ ತಾಲ್ಲೂಕಿನ ಗಬಡಿ ಗ್ರಾಮದ ನಿವೇಶನಕ್ಕೆ ಸಂಬಂಧಿಸಿದಂತೆ ವಾಸಂತಿ ಅವರು 2015ರಲ್ಲಿ ಅದೇ ಗ್ರಾಮದ ಜಿ ಡಿ ಉಮೇಶ್ ವಿರುದ್ಧ ಸ್ಥಳೀಯ ನ್ಯಾಯಾಲಯದಲ್ಲಿ ಸಿವಿಲ್ ದಾವೆ ದಾಖಲಿಸಿದ್ದರು.
ವಾಸಂತಿ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ಸಲ್ಲಿಸಿದ್ದಾರೆ ಎಂದು ಆರೋಪಿಸಿ ಉಮೇಶ್ ಪ್ರತ್ಯೇಕ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ಇದನ್ನು ವಿಚಾರಣೆಗೆ ಅಂಗೀಕರಿಸಿದ್ದ ಸ್ಥಳೀಯ ವಿಚಾರಣಾಧೀನ ನ್ಯಾಯಾಲಯವು ಐಪಿಸಿ ಸೆಕ್ಷನ್ಗಳಾದ 420, 419, 423, 415, 417, 465, 471 ಮತ್ತು 468 ಅಡಿಯಲ್ಲಿ ಸಂಜ್ಞೇಯ ಅಪರಾಧ ದಾಖಲಿಸಿಕೊಂಡು ಸಮನ್ಸ್ ಜಾರಿಗೊಳಿಸಿತ್ತು. ಇದನ್ನು ವಜಾ ಮಾಡುವಂತೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.