ಮೈಸೂರು: ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಪ್ರಥಮಬಾರಿಗೆ ಮೆಟ್ರಾನಿಕ್ ಸೆಲ್ಫ್ ಎಕ್ಸ್ಪೆಂಡಿಂಗ್ ಅಯೋರ್ಟಿಕ್ ಕವಾಟವನ್ನು (TAVI) ಹೃದಯ ಶಸ್ತ್ರಚಿಕಿತ್ಸೆ ಇಲ್ಲದೆ ಯಶಸ್ವಿಯಾಗಿ ರೋಗಿಯೊಬ್ಬರಿಗೆ ಹೃದಯಕ್ಕೆ ಅಳವಡಿಸಲಾಗಿದೆ ಎಂದು ಮೈಸೂರು ಜಯದೇವ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಕೆ.ಎಸ್. ಸದಾನಂದ್ ತಿಳಿಸಿದರು.
ಕೊಳ್ಳೇಗಾಲದ ೮೧ ವರ್ಷದ ನಿವೃತ್ತ ಉಪನ್ಯಾಸಕರಾದ ಚನ್ನಮಾದೇಗೌಡ ಅವರಿಗೆ ಡಾ. ಬಿ. ದಿನೇಶ್, ಡಾ. ಪ್ರಶಾಂತ್ ದ್ವಿವೇದಿ ನೇತೃತ್ವದ ತಂಡ ಯಶಸ್ವಿಯಾಗಿ ಅಯೋರ್ಟಿಕ್ ಕವಾಟವನ್ನು ಅಳವಡಿಸಲಾಗಿದೆ. ಸಾಮಾನ್ಯವಾಗಿ ಈ ಸಮಸ್ಯೆಗೆ ತೆರೆದ ಹೃದಯ ಚಿಕಿತ್ಸೆ ಮಾಡುತ್ತೇವೆ. ಆದರೆ ವಯಸ್ಸಾದವರಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗದವರಿಗೆ ತೊಡೆಯ ರಕ್ತನಾಳದ ಮೂಲಕ ಅಯೋರ್ಟಿಕ್ ಕವಾಟವನ್ನು ಹೃದಯಕ್ಕೆ ಜೋಡಿಸಲಾಗುತ್ತದೆ. ಈ ಚಿಕಿತ್ಸೆಗೆ ೧೬ ಲಕ್ಷ ರೂ. ವೆಚ್ಚವಾಗುತ್ತದೆ ಇದರಲ್ಲಿ ೧ ಲಕ್ಷ ರೂ. ರಿಯಾಯಿತಿ ನೀಡಲಾಗಿದೆ ಎಂದರು.
ಡಾ. ಬಿ. ದಿನೇಶ್ ಮಾತನಾಡಿ ಈ ಶಸ್ತ್ರ ಚಿಕಿತ್ಸೆಯಿಂದ ಎದೆಯ ಮೇಲೆ ಯಾವುದೇ ತರಹದ ಗಾಯಗಳಾಗುವುದಿಲ್ಲ. ಶಸ್ತ್ರ ಚಿಕಿತ್ಸೆ ಆದ ಮೂರೇ ದಿನದಲ್ಲಿ ಸಾಮಾನ್ಯರಂತೆ ಓಡಾಡುಬಹುದು. ಈ ಚಿಕಿತ್ಸೆ ರೋಗಿಗಳಿಗೆ ವರದಾನವಾಗಿದೆ. ಇನ್ಸೂರೆನ್ಸ್, ಇ.ಎಸ್.ಐ., ಸಿ.ಜಿ.ಹೆಚ್.ಎಸ್. ಲಭ್ಯವಿರುವ ರೋಗಿಗಳು ಇದರ ಅನುಕೂಲವನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದರು.
ಈ ಯಶಸ್ವಿ ಚಿಕಿತ್ಸೆಯ ತಂಡದಲ್ಲಿ ಡಾ. ವೈ.ಎಸ್. ಶ್ರೀಮಂತ್, ಡಾ. ಜೆ. ಸ್ನೇಹಲ್, ಡಾ. ಭಾರತಿ, ಡಾ. ನಿಶ್ಚಿತ್, ಡಾ. ಮಧುಪ್ರಕಾಶ್, ಡಾ. ಚಂದನ್, ಡಾ. ಮಿಥುನ್, ಟೆಕ್ನಿಷಿಯನ್ಗಳಾದ ನಾಗರಾಜ್, ಸುಮ, ಶಾಂತ, ಹಿರಿಯ ಶುಶ್ರೂಷಾಧಿಕಾರಿ ಹರೀಶ್ಕುಮಾರ್ ಹಾಜರಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.