ಮೈಸೂರು: ಇಲ್ಲಿನ ಆಡಳಿತ ತರಬೇತಿ ಸಂಸ್ಥೆಯ (ಎಟಿಐ) ಅತಿಥಿ ಗೃಹದಲ್ಲಿ ನಾಪತ್ತೆಯಾದ ಸಾಮಗ್ರಿಗಳಿಗೆ ತಗಲುವ ಮೊತ್ತವನ್ನು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವೇತನದಲ್ಲೇ ಕಡಿತಗೊಳಿಸಬೇಕು ಎಂದು ಕೋರಿ ಸಂಸ್ಥೆಯ ಜಂಟಿ ನಿರ್ದೇಶಕರು (ಆಡಳಿತ) ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಹೋದ ವರ್ಷ ಮೇ 9ರಂದು ಪತ್ರ ಬರೆಯಲಾಗಿದೆ. ಇದಾಗಿ ವರ್ಷವೇ ಕಳೆದಿದ್ದರೂ ಯಾವುದೇ ಕ್ರಮವಾಗಿಲ್ಲ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.
ರೋಹಿಣಿ ಇಲ್ಲಿನ ಜಿಲ್ಲಾಧಿಕಾರಿ ಯಾಗಿ ಬಂದ ವೇಳೆ ಅಂದರೆ 2020ರ ಅ.2ರಿಂದ 2020ರ ನ.14ರವರೆಗೆ ಎಟಿಐ ಅತಿಥಿಗೃಹದಲ್ಲಿ ವಾಸವಿದ್ದರು. ಬಳಿಕ ಜಿಲ್ಲಾಧಿಕಾರಿ ನಿವಾಸಕ್ಕೆ ಸ್ಥಳಾಂತರದ ವೇಳೆ ಅತಿಥಿಗೃಹದ 2 ಟೆಲಿಫೋನ್ ಟೇಬಲ್, 2 ಬಟ್ಟೆ ಹ್ಯಾಂಗರ್, 2 ಬೆತ್ತದ ಕುರ್ಚಿ, 2 ಟೆಲಿಫೋನ್ ಸ್ಟೂಲ್, 2 ಟೀಪಾಯಿ, ಒಂದು ಮೈಕ್ರೋವೇವ್ ಒವನ್, ಮಂಚ, ಹಾಸಿಗೆ, 2 ಪ್ಲಾಸ್ಟಿಕ್ ಕುರ್ಚಿ, 2 ಯೋಗಾ ಮ್ಯಾಟ್, 2 ಸ್ಟೀಲ್ ಜಗ್ ಕೊಂಡೊಯ್ದಿದ್ದಾರೆ ಎಂದು ಸಂಸ್ಥೆಯು ಜಿಲ್ಲಾಧಿಕಾರಿ ಕಚೇರಿಗೆ ಪತ್ರ ಬರೆದಿತ್ತು. ಸಿಂಧೂರಿ ಅವರು ಇಲ್ಲಿಂದ ವರ್ಗವಾದ ಬಳಿಕ ಪತ್ರ ಬರೆಯಲಾಗಿತ್ತು.
ಅತಿಥಿ ಗೃಹದಲ್ಲಿನ 20 ವಸ್ತುಗಳನ್ನು ಜಿಲ್ಲಾಧಿಕಾರಿ ನಿವಾಸಕ್ಕೆ ಒಯ್ದಿದ್ದಾರೆ, ಅವುಗಳನ್ನು ಮರಳಿಸಬೇಕು ಎಂದು ಸಂಸ್ಥೆಯು ಜಿಲ್ಲಾಧಿಕಾರಿ ಕಚೇರಿಯನ್ನೂ ಕೋರಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಜಿಲ್ಲಾಧಿಕಾರಿ ಕಚೇರಿಯು, ಜಿಲ್ಲಾಧಿಕಾರಿ ವಸತಿ ಗೃಹದಲ್ಲಿ ಎಟಿಐನ ಯಾವುದೇ ಸಾಮಗ್ರಿಗಳು ಇಲ್ಲ ಎಂದು ಸ್ಪಷ್ಟಪಡಿಸಿತ್ತು.
ಇದಾದ ಬಳಿಕ, ಜಿಲ್ಲಾಧಿಕಾರಿ ಉತ್ತರ ಆಧರಿಸಿ ಸಂಸ್ಥೆಯು ರೋಹಿಣಿ ಅವರಿಗೆ ಮತ್ತೊಂದು ಪತ್ರ ಬರೆದಿತ್ತು. ಆದರೆ, ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಈ ಕಾರಣದಿಂದ ಮತ್ತೊಂದು ಪತ್ರ ಬರೆದಿರುವ ಸಂಸ್ಥೆಯ ಜಂಟಿ ನಿರ್ದೇಶಕರು, ಸಾಮಗ್ರಿಗಳ ಮೌಲ್ಯದ ಮೊತ್ತವನ್ನು ಆ ಅಧಿಕಾರಿಯ ವೇತನದಲ್ಲಿ ಕಟಾವು ಮಾಡಿ ಸಂಸ್ಥೆಗೆ ಜಮೆ ಮಾಡಬೇಕು ಎಂದು ಕೋರಿದ್ದಾರೆ.
ಪ್ರಕರಣದ ಬಗ್ಗೆ ಪ್ರತಿಕ್ರಿಯಿ ಸಲು ಸಂಸ್ಥೆಯ ಮಹಾನಿರ್ದೇಶಕಿ ವಿ. ಮಂಜುಳಾ ನಿರಾಕರಿಸಿದರು.
ಎಟಿಐ ಪತ್ರವನ್ನು ನಾನು ನೋಡಿಲ್ಲ ಎಂದು ರೋಹಿಣಿ ಪ್ರತಿಕ್ರಿಯಿಸಿ ದರು. ಪ್ರತಿಯನ್ನು ವಾಟ್ಸ್ಆ್ಯಪ್ನಲ್ಲಿ ತರಿಸಿಕೊಂಡು ವೀಕ್ಷಿಸಿದ ಬಳಿಕವೂ ಯಾವುದೇ ಪ್ರತಿಕ್ರಿಯೆಯನ್ನೂ ಅವರು ನೀಡಲಿಲ್ಲ. ಮೊಬೈಲ್ ಫೋನ್ ಕರೆಯನ್ನೂ ಸ್ವೀಕರಿಸಲಿಲ್ಲ.
ಎಟಿಐ ವಸತಿಗೃಹದ ಸಾಮಗ್ರಿಗಳು ನಾಪತ್ತೆಯಾಗಿವೆ ಎಂದು ಸಂಸ್ಥೆ ಹೇಳುತ್ತಿದೆ.
ನಮ್ಮ ಬಳಿ ಇಲ್ಲ ಎಂದು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಪ್ರತಿಕ್ರಿಯಿಸಿದೆ.
ವೇತನದಲ್ಲಿ ಹಣ ಕಡಿತಕ್ಕೆ ಸಂಬಂಧಿಸಿದಂತೆ ಎಟಿಐ ಪತ್ರವೇ ತಲುಪಿಲ್ಲ ಎಂದು ರೋಹಿಣಿ ಹೇಳುತ್ತಿದ್ದಾರೆ. ಹಾಗಾದರೆ, ಸಾವಿರಾರು ರೂಪಾಯಿ ಮೌಲ್ಯದ ಸಾಮಗ್ರಿಗಳು ಏನಾದವು, ಒಯ್ದಿಯ್ದು ಯಾರು ಎಂಬ ಪ್ರಶ್ನೆಗಳು ಎದುರಾಗಿವೆ. ಹಲವು ಅನುಮಾನಗಳಿಗೂ ಇದು ಕಾರಣವಾಗಿದೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.