ಮನೆ ಅಪರಾಧ ಮೈಸೂರು: ಗುರಾಯಿಸಿ ನೋಡಿದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ

ಮೈಸೂರು: ಗುರಾಯಿಸಿ ನೋಡಿದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ

0

ಮೈಸೂರು: ಗುರಾಯಿಸಿ ನೋಡಿದ ಯುವಕನನ್ನ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿನಗರದಲ್ಲಿ ನಡೆದಿದೆ.

Join Our Whatsapp Group

ಅರ್ಬಾಜ್ ಖಾನ್(18) ಮೃತ ಯುವಕ.

ಶಾದಿಲ್,ಶಹಬಾಜ್,ಶೋಯಬ್ ಹಾಗೂ ಸಾಹಿಲ್ ಕೃತ್ಯವೆಸಗಿದೆ ಆರೋಪಿಗಳು.

ಪರಸ್ಪರ ಗಲಾಟೆಯಲ್ಲಿ ಆರೋಪಿ ಶಹಬಾಜ್ ಸಹ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ.

ಶಾಂತಿನಗರದ ಲಾಲ್ ಮಸೀದಿ ಬಳಿ ಅರ್ಬಾಜ್ ಖಾನ್ ಗುರಾಯಿಸಿ ನೋಡಿದ್ದಾನೆ.ಈ ವಿಚಾರದಲ್ಲಿ ಗಲಾಟೆ ಶುರುವಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.