ಮನೆ ಸ್ಥಳೀಯ ಚುನಾವಣೆಯ ಮತ ಎಣಿಕೆ ಕಾರ್ಯವನ್ನು ಅಚ್ಚು ಕಟ್ಟಾಗಿ ನಿರ್ವಹಿಸಿ ಯಶಸ್ವಿಗೊಳಿಸಬೇಕು: ಡಾ ಜೆ.ಸಿ.ಪ್ರಕಾಶ

ಚುನಾವಣೆಯ ಮತ ಎಣಿಕೆ ಕಾರ್ಯವನ್ನು ಅಚ್ಚು ಕಟ್ಟಾಗಿ ನಿರ್ವಹಿಸಿ ಯಶಸ್ವಿಗೊಳಿಸಬೇಕು: ಡಾ ಜೆ.ಸಿ.ಪ್ರಕಾಶ

0

ಮೈಸೂರು.: ಮುಂಬರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯವನ್ನು ಬಹಳ ಖುಷಿಯಿಂದ ಅಚ್ಚುಕಟ್ಟಾಗಿ  ನಿರ್ವಹಿಸಿ ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಪದವೀಧರರ ಕ್ಷೇತ್ರ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರಾದ ಡಾ ಜೆ.ಸಿ. ಪ್ರಕಾಶ್ ಅವರು ಮತ ಎಣಿಕೆ ತರಬೇತಿಯಲ್ಲಿ ತಿಳಿಸಿದರು.

Join Our Whatsapp Group

ಇಂದು ಪ್ರಾದೇಶಿಕ ಆಯುಕ್ತರ ಕಚೇರಿಯ ಚಾಮುಂಡೇಶ್ವರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ , ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರದ  ಮತ ಎಣಿಕೆ ಸಿಬ್ಬಂದಿಗೆ ಮತ ಎಣಿಕೆ  ತರಬೇತಿಯನ್ನು ಕುರಿತು ಅವರು ಮಾತನಾಡಿದರು .

ಮೈಸೂರು ,ಚಾಮರಾಜನಗರ, ಹಾಸನ ಮತ್ತು ಮಂಡ್ಯದ ಒಟ್ಟು 14 ಕೌಂಟಿಂಗ್ ಟೇಬಲ್ ಗಳಲ್ಲಿ  ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆ ಕಾರ್ಯದಲ್ಲಿ ಪ್ರತಿಯೊಬ್ಬರೂ ಸಹ ಪಾಲ್ಗೊಂಡು ಎಣಿಕೆ  ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದರು.

ಇದು ಬ್ಯಾಲೆಟ್ ಪೇಪರ್ ಮತದಾನ ಪ್ರಕ್ರಿಯೆ  ಆಗಿದ್ದು, ಅದರ ವ್ಯಾಲಿಡ್ ಮತ್ತು ಇನ್  ವ್ಯಾಲಿಡ್  ಮತಪತ್ರದ ಬಗ್ಗೆ ಮಾಹಿತಿ ನೀಡಿದರು. ಬ್ಯಾಲೆಟ್ ಪೇಪರ್ ಗಳನ್ನು ಯಾವ ರೀತಿ ತೆರೆಯಬೇಕು ,ಯಾವುದು ವ್ಯಾಲಿಡ್, ಯಾವುದು ವ್ಯಾಲಿಡ್ ಅಲ್ಲ ಎಂಬುದನ್ನು ಯಾವ ರೀತಿ ಗುರುತಿಸಬೇಕು‌. ಸಂಖ್ಯೆಗಳನ್ನು ಯಾವ ರೀತಿ ಕೊಡಬೇಕು. ಯಾವುದನ್ನು ರಿಜೆಕ್ಷನ್ ಮಾಡಬೇಕು ಎಂಬುದರ ಬಗ್ಗೆ ಮಾಹಿತಿ ನೀಡುತ್ತಾ ಯಾವುದು ದಾದರೂ ಗೊಂದಲದ ಪರಿಸ್ಥಿತಿ ಬಂದಲ್ಲಿ ಆರ್ .ಓ  ಗಮನಕ್ಕೆ  ತರಬೇಕು  ಎಂದು  ಮತ ಎಣಿಕೆ  ತರಬೇತುದಾರರಿಗೆ ಸಲಹೆ ನೀಡಿದರು. 

ಮತ ಎಣಿಕೆ ಸಿಬ್ಬಂದಿಗಳು ಮತ ಎಣಿಕೆಯ ದಿನ  ಬೆಳಿಗ್ಗೆ 7 ಗಂಟೆಗೆ  ಹಾಜರಿರಬೇಕು. ಇದು ಬಹಳ ಸುಲಭದ  ಕೆಲಸವಾಗಿದ್ದು, ಮತ ಪತ್ರ  ಎಣಿಕೆ ಮಾಡಿ 25 ಬ್ಯಾಲೆಟ್ ಪೇಪರ್ ಗಳ ಒಂದು ಬಂಡೆಲ್ ಮಾಡಿ , ಅದಲ್ಲಿ ಮೊದಲ ಆದ್ಯತೆಯ ಬ್ಯಾಲೆಟ್ ಪೇಪರ್  ಗಳನ್ನು ಬೇರ್ಪಡಿಸಿ ಕೊಡಬೇಕು ಎಂದು ತಿಳಿಸಿದರು.

ಪ್ರಾದೇಶಿಕ ಕಚೇರಿಯ ಸಹಾಯಕ ಚುನಾವಣಾಧಿಕಾರಿಗಳಾದ  ಕವಿತಾ ರಾಜಾರಾಂ ಅವರು ಮಾತನಾಡಿ, ಚುನಾವಣೆಯ ದಿನ ಬೆಳಗ್ಗೆ  8 ಗಂಟೆಗೆ ವೋಟಿಂಗ್ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಕಡ್ಡಾಯವಾಗಿ ನಿಮ್ಮ ಐಡಿ ಕಾರ್ಡ್ಗಳನ್ನು ಧರಿಸಿ ಕಾರ್ಯ ನಿರ್ವಹಿಸಬೇಕು ಎಂದರು .

ಮತಗಟ್ಟೆಯ ಕ್ಷೇತ್ರಗಳ  ಬಳಿ ಕೌಂಟಿಂಗ್ ಸೂಪರ್ವೈಸರ್, ಕೌಂಟಿಂಗ್ ಅಸಿಸ್ಟೆಂಟ್ಸ್ , ಕೌಂಟಿಂಗ್ ಏಜೆಂಟ್ಸ್ ಗಳಿಗೆ ಮಾತ್ರ ಪ್ರವೇಶ ನೀಡಬೇಕು. ತರಬೇತುದಾರರು ಮತಗಟ್ಟೆ ಒಳಗೆ ಮೊಬೈಲ್ಅನ್ನು  ತೆಗೆದುಕೊಂಡು ಹೋಗುವಂತಿಲ್ಲ ಹಾಗೂ  ಚುನಾವಣಾಧಿಕಾರಿಗಳ ಸಲಹೆ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ  ಸೂಚಿಸಿದರು .

ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.