ಮನೆ ಕಾನೂನು ಪ್ರಜ್ವಲ್ ರೇವಣ್ಣರನ್ನ 15 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಎಸ್ ಐಟಿ ಮನವಿ: ಆದೇಶ ಕಾಯ್ದಿರಿಸಿದ...

ಪ್ರಜ್ವಲ್ ರೇವಣ್ಣರನ್ನ 15 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಎಸ್ ಐಟಿ ಮನವಿ: ಆದೇಶ ಕಾಯ್ದಿರಿಸಿದ ಕೋರ್ಟ್

0

ಬೆಂಗಳೂರು:  ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐ ಟಿ ಅಧಿಕಾರಿಗಳು ಬಂಧಿಸಿ ಇಂದು  ಬೆಂಗಳೂರಿನ 42ನೇ ಎಸಿ ಎಂ ಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು,  15 ದಿನಗಳ ಕಾಲ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು.

Join Our Whatsapp Group

ಪ್ರಕರಣ ಸಂಬಂಧ ವಾದ ಪ್ರತಿವಾದಗಳು ಅಂತ್ಯವಾಗಿದ್ದು,  ನ್ಯಾಯಾಲಯವು ಸಂಜೆ 4:15ಕ್ಕೆ ಪ್ರಜ್ವಲ್ ರೇವಣ್ಣ  ಕಸ್ಟಡಿಗೆ ನೀಡಬೇಕೂ ಅಥವಾ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬೇಕೋ ಎಂಬ ಕುರಿತು ಆದೇಶ ಹೊರಡಿಸಲಿದೆ.

ಪ್ರಜ್ವಲ್ ರೇವಣ್ಣ ಪರವಾಗಿ ವಕೀಲ ಅರುಣ್ ಅವರು ವಾದ ಮಂಡಿಸಿದರು.  ಎಸ್‌ಐಟಿ ಪರ ಎಸ್‌ಪಿಪಿ ಅಶೋಕ್ ನಾಯಕ್ ವಾದ ಮಂಡಿಸಿದರು.