ತೀರ್ಥಹಳ್ಳಿ : ಹಣ ವರ್ಗಾವಣೆ ಆಗಿರುವುದೇ ಬಹಳ ದೊಡ್ಡ ಹಗರಣದ ಸಂಕೇತ, ಹಾಗಾಗಿ ಸಿಬಿಐ ತನಿಖೆ ಆಗಬೇಕು, ಪ್ರಕರಣದ ತನಿಖೆಯನ್ನು ಮಣ್ಣು ಮುಚ್ಚಲು ಎಸ್ಐಟಿ ರಚನೆ ಮಾಡಿದ್ದಾರೆ. ಎಸ್ಐಟಿ ಎನ್ನುವುದು ಸಿದ್ದರಾಮಯ್ಯನವರ ಒಂದು ನಾಟಕ ಎಂದು ಆರಗ ಜ್ಞಾನೇಂದ್ರ ಹೇಳಿದರು.
ಶನಿವಾರ ಪಟ್ಟಣದ ಕೊಪ್ಪ ಸರ್ಕಲ್ ನಲ್ಲಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿ ನಂತರ ಮಾಧ್ಯಮದ ಜೊತೆಗೆ ಮಾತನಾಡಿದ ಅವರು ಎಸ್ಐಟಿಯನ್ನು ನಾವು ಒಪ್ಪುವುದಿಲ್ಲ,ಈ ಹಗರಣವನ್ನು ಸಿಬಿಐ ಗೆ ಒಪ್ಪಿಸಬೇಕು ಮತ್ತು ದಲಿತರ ಹಣ ಈ ರೀತಿ ದುರುಪಯೋಗ ಆಗುವುದು ಅಮಾನವೀಯ ಎಂದರು.
ಇವರ ಲೂಟಿಯಿಂದ ಇನ್ನು ಎಷ್ಟು ಮಂದಿ ಅಧಿಕಾರಿಗಳು ಸಾಯುತ್ತಾರೋ ಗೊತ್ತಿಲ್ಲ, ಇವರ ಮೇಲೆ ಮರ್ಡರ್ ಕೇಸ್ ದಾಖಲಿಸಬೇಕು, ಸಚಿವರ ಮೇಲೆ ಮರ್ಡರ್ ಕೇಸ್ ದಾಖಲಿಸಬೇಕು ಅವರಿಂದಲೇ ಸತ್ತಿದ್ದು. ಅವರ ನಿರ್ದೇಶನದಿಂದಲೇ ಹೀಗೆ ಆಗಿದ್ದು, ಅವರಿಗೆ ನಿರ್ದೇಶನ ಕೊಟ್ಟಿದ್ದು ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಅವರು,ತೆಲಂಗಾಣ ಚುನಾವಣೆಗೆ ಹಣವನ್ನು ಲೂಟಿ ಮಾಡಿದ್ದಾರೆ. ಮೊದಲಿಂದಲೂ ಹೇಳುತ್ತಿದ್ದೆವು ಇದು ಎಟಿಎಂ ಸರ್ಕಾರ ಎಂದು ಅದನ್ನು ಅವರು ಸಾಭಿತುಪಡಿಸಿದ್ದಾರೆ ನಮ್ಮ ಹೋರಾಟ ಇನ್ನು ಮುಂದುವರೆಯುತ್ತದೆ ಎಂದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.