ಮನೆ ಅಪರಾಧ ಮಂಡ್ಯ: ಅಕ್ರಮವಾಗಿ ಸಾಗಿಸುತ್ತಿದ್ದ ಗೋವಿನ ಕರುಗಳ ರಕ್ಷಣೆ

ಮಂಡ್ಯ: ಅಕ್ರಮವಾಗಿ ಸಾಗಿಸುತ್ತಿದ್ದ ಗೋವಿನ ಕರುಗಳ ರಕ್ಷಣೆ

0

ಮಂಡ್ಯ: ಅಕ್ರಮವಾಗಿ ಸಾಗಿಸುತ್ತಿದ್ದ ಗೋವಿನ ಕರುಗಳ ರಕ್ಷಣೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಬಳಿ ನಡೆದಿದೆ.

Join Our Whatsapp Group

ಕಾರಿನಲ್ಲಿ ಕಸಾಯಿಖಾನೆಗೆ ಗೋವುಗಳ ಕರುಗಳನ್ನು ಸಾಗಿಸುತ್ತಿದ್ದ ವೇಳೆ ಪಟ್ಟಣದಲ್ಲಿ ಕಾರನ್ನು ಅಡ್ಡಗಟ್ಟಿ 20 ಕ್ಕೂ ಹೆಚ್ಚು ಕರುಗಳನ್ನು ಹಿಂಜಾವೇ ಸಂಘಟನೆಯ ಕಾರ್ಯಕರ್ತರು ರಕ್ಷಿಸಿದ್ದಾರೆ.

ಕಾರ್ಯಕರ್ತರು ಕಾರು ಚಾಲಕನನ್ನು ಹಿಡಿದು ಪೊಲೀಸರ ವಶಕ್ಕೆ‌ ನೀಡಿದ್ದಾರೆ.

ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳು ಗೋ ಹತ್ಯೆ ನಿಷೇಧ ಕಾಯ್ದೆ 2019 ಅಡಿ ಪ್ರಕರಣವನ್ನು ದಾಖಲಿಸಿಕೊಂಡು, ಗೋವು ಸಾಗಿಸುತ್ತಿದ್ದ ರಿಟ್ಜ್ (KA 11,M 4593) ಬಿಳಿ ಬಣ್ಣದ ಕಾರನ್ನು ಮುಟ್ಟುಗೋಲು ಮಾಡಿಕೊಂಡಿದ್ದಾರೆ.

ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.