ಮನೆ ರಾಜ್ಯ ವರ್ಷಪೂರ್ತಿ ಏನು ಕೆಲಸ ಮಾಡುತ್ತೀರಾ?: ಬಿಬಿಎಂಪಿ ಅಧಿಕಾರಿಗಳಿಗೆ ಬೆಂಡೆತ್ತಿದ ಸಿಎಂ ಬೊಮ್ಮಾಯಿ

ವರ್ಷಪೂರ್ತಿ ಏನು ಕೆಲಸ ಮಾಡುತ್ತೀರಾ?: ಬಿಬಿಎಂಪಿ ಅಧಿಕಾರಿಗಳಿಗೆ ಬೆಂಡೆತ್ತಿದ ಸಿಎಂ ಬೊಮ್ಮಾಯಿ

0

ಬೆಂಗಳೂರು (Bengaluru)- ವರ್ಷಪೂರ್ತಿ ಏನು ಕೆಲಸ ಮಾಡುತ್ತೀರಾ? ಎಂದು ಬಿಬಿಎಂಪಿ ಎಂಜಿನಿಯರ್‌ಗಳು, ಅಧಿಕಾರಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತರಾಟೆಗೆ ತೆಗೆದುಕೊಂಡಿದ್ದಾರೆ.

ಇಂದು ಸಿಟಿ ರೌಂಡ್ಸ್ ನಂತರ ಗೃಹ ಕಚೇರಿ ಕೃಷ್ಣಾದಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಫುಲ್ ಗರಂ ಆದ ಬೊಮ್ಮಾಯಿ ಅವರು, ವರ್ಷಪೂರ್ತಿ ಏನು ಕೆಲಸ ಮಾಡುತ್ತೀರಾ? ಮಳೆಗಾಲ ಬರುತ್ತೆ.. ಸಮಸ್ಯೆ ಆಗುತ್ತೆ ಅನ್ನೋದು ಗೊತ್ತಾಗಲ್ಲ್ವಾ? ವರ್ಷಪೂರ್ತಿ ಮಲಗಿರೋದು. ಮಳೆ ಬಂದಾಗ ಎಚ್ಚೆತ್ತುಕೊಳ್ಳೋದು. ಇದೇ ಆಗೋಯ್ತು ನಿಮ್ ಹಣೆ ಬರಹ ಎಂದು ಅಧಿಕಾರಿಗಳಿಗೆ ಬೆಂಡೆತ್ತಿದ್ದಾರೆ.

ನೀವು ನಿಮ್ಮ ಕರ್ತವ್ಯ ಮರೆತಿದ್ದೀರಾ. ಮಳೆಗಾಲಕ್ಕೂ ಮುನ್ನ ಚರಂಡಿಗಳ ಹೂಳೆತ್ತಿಸಬೇಕು. ಮಳೆನೀರು ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ಇದು ನಿಮ್ಮ ಕೆಲಸ ಅಲ್ವಾ? ಈ ಕೆಲಸ ಬಿಟ್ಟು ಬೇರೆ ಎಲ್ಲಾ ಕೆಲಸ ಮಾಡುತ್ತೀರಾ. ಫೀಲ್ಡಿಗಿಳಿದು ಕೆಲಸ ಮಾಡಿ. ತಾಂತ್ರಿಕ ವಿಭಾಗವನ್ನು ಬಲಪಡಿಸಿ ಎಂದು ಬಿಬಿಎಂಪಿ ಆಯುಕ್ತರಿಗೆ ಖಡಕ್ ಸೂಚನೆ ನೀಡಿದರು.

ದಿನದ 24‌ ಗಂಟೆ ಫೀಲ್ಡಿಗೆ ಇಳಿದು ಕೆಲಸ ಮಾಡಿ. ಮಳೆ ಆರಂಭಕ್ಕೂ ಮುನ್ನ ಎಚ್ಚೆತ್ತುಕೊಳ್ಳಬೇಕಿತ್ತು. ಎಲ್ಲ ಚರಂಡಿಗಳಲ್ಲಿನ ಹೂಳು ಎತ್ತಿಸಬೇಕಿತ್ತು. ಅದನ್ನು ಮಾಡದೇ ಜನ ಪರದಾಟುವ ಹಾಗೆ ಮಾಡಿದ್ದೀರಿ ಎಂದ ಸಿಎಂ, ರಾಜಕಾಲುವೆ ವಿಚಾರದಲ್ಲಿ ಗುಣಮಟ್ಟದ ಕಾಮಗಾರಿ ನಡೆಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಬಿಬಿಎಂಪಿ ವಲಯ ಆಯುಕ್ತರು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ಜನವರಿಯಲ್ಲೇ ಎಚ್ಚೆತ್ತುಕೊಳ್ಳಬೇಕು. ಕಾಮಗಾರಿಗಳನ್ನು ನೀವೇ ಮಾಡಿಸಿ ಬಿಲ್ ಪಾವತಿಸಿ. ಅಧಿಕಾರ ವಿಕೇಂದ್ರೀಕರಣ ಮಾಡಿ. ಎಂಜಿನಿಯರಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಕೆಲಸ ಮಾಡದ ಎಂಜಿನಿಯರಗಳ ಮೆಲೆ ಕ್ರಮ ಕೈಗೊಳ್ಳಿ ಎಂದು ಆಯುಕ್ತರಿಗೆ ಸೂಚನೆ ನೀಡಿದರು.