ಮಗುವನ್ನು ಸುಪರ್ದಿಗೆ ಪಡೆಯುವ ವಿಚಾರದಲ್ಲಿ ಪೋಷಕರ ನಡುವಿನ ಜಗಳದಿಂದಾಗಿ ಮಗುವಿನ ಯೋಗಕ್ಷೇಮ ನಿರ್ಲಕ್ಷ್ಯಕ್ಕೆ ಒಳಗಾದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕಳವಳ ವ್ಯಕ್ತಪಡಿಸಿದೆ.
ಜಗಳ ಮಾಡುವ ಬದಲು ಬಿರುಬಿಸಿಲಿನಿಂದ ತತ್ತರಿಸಿರುವ ದೆಹಲಿಯಲ್ಲಿ ಮಗುವನ್ನು ಸೂಕ್ತ ರೀತಿಯಲ್ಲಿ ಆರೈಕೆ ಮಾಡುವಂತೆ ನ್ಯಾ. ಪಿ ವಿ ಸಂಜಯ್ ಕುಮಾರ್ ಮತ್ತು ಅಗಸ್ಟಿನ್ ಜಾರ್ಜ್ ಮಸಿಹ್ ಅವರಿದ್ದ ರಜಾಕಾಲೀನ ಪೀಠ ಪೋಷಕರ ಕಿವಿ ಹಿಂಡಿತು.
ಕಳೆದ ನವೆಂಬರ್ನಿಂದ ಮಗು ಅನಾರೋಗ್ಯದಿಂದ ಬಳಲುತ್ತಿದೆ ಎಂಬುದನ್ನು ಗಮನಿಸಿದ ನ್ಯಾಯಾಲಯ ಪೋಷಕರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು.
“ನಿಮಗೆ ಇಲ್ಲಿಯವರೆಗೆ ಒಳ್ಳೆಯ ಮಕ್ಕಳ ವೈದ್ಯರನ್ನು ಹುಡುಕಲು ಸಾಧ್ಯವಾಗಲಿಲ್ಲ. ತಂದೆ-ತಾಯಿಗಳಿಬ್ಬರೂ ತಮ್ಮ ಮಗುವನ್ನು ಅಡ ಇಡಲು ಹೊರಟಿದ್ದಾರೆ. ತೀರಾ ಭಯಂಕರವಾಗಿದೆ. ನಿಮಗಿಬ್ಬರಿಗೂ ಮಗುವಿನ ಮೇಲೆ ಯಾವುದೇ ಪ್ರೀತಿ ಇಲ್ಲ. ಬದಲಿಗೆ ಮಗುವಿನ ಖರ್ಚಿನ ವಿಚಾರಕ್ಕೆ ಜಗಳವಾಡುತ್ತಿದ್ದೀರಿ. ಸಾಕಷ್ಟು ತಿಂಗಳುಗಳು ಇದರಲ್ಲೇ ಕಳೆದು ಹೋಗಿವೆ” ಎಂದು ನ್ಯಾ. ಕುಮಾರ್ ಹೇಳಿದರು.
“ಮಗುವಿನ ಹಕ್ಕುಗಳ ಬಗ್ಗೆಯಷ್ಟೇ ನಮಗೆ ಕಾಳಜಿ. ನಿಮ್ಮಲ್ಲಿ ಯಾರೊಬ್ಬರ ಬಗ್ಗೆಯೂ ಅಲ್ಲ. ನಿಮ್ಮ ಮಗುವಿನ ಕಾಳಜಿ ವಹಿಸಿ. ವಿಪರೀತ ಉಷ್ಣದ ವಾತಾವರಣ ಇದೆ” ನ್ಯಾ. ಮಸಿಹ್ ಅವರು ದನಿಗೂಡಿಸಿದರು.
ಬಳಿಕ ಪಕ್ಷಕಾರರ ವಾದ ಆಲಿಸಿದ ನ್ಯಾಯಾಲಯ ತಂದೆಗೆ ಭೇಟಿ ನೀಡುವ ಹಕ್ಕನ್ನು ನೀಡಿತು.
ರಾಷ್ಟ್ರ ರಾಜಧಾನಿಯಲ್ಲಿ ಬಿಸಿಗಾಳಿಯ ಜೊತೆಗೆ 50 ಡಿಗ್ರಿ ಸೆಲ್ಸಿಯಸ್ಗಿಂತ ತಾಪಮಾನ ಇದ್ದು ನೀರಿನ ಕೊರತೆ ಎದುರಿಸುತ್ತಿದೆ. ದೆಹಲಿಗೆ ನೀರು ಒದಗಿಸುವಂತೆ ಕೋರಿ ಅಲ್ಲಿನ ಸರ್ಕಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.