ಕಲಬುರಗಿ: ಮದುವೆಯಾಗುವಂತೆ ದುಂಬಾಲು ಬಿದ್ದ ಯುವಕನಿಂದ ಬೇಸತ್ತ ವಿದ್ಯಾರ್ಥಿನಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಧೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸೇಡಂ ತಾಲ್ಲೂಕಿನ ಗಾಡ್ದನ್ ಗ್ರಾಮದ ಬಿಕಾಂ ವಿದ್ಯಾರ್ಥಿನಿ ಶಿವಲೀಲಾ (21) ಆತ್ಮಹತ್ಯೆ ಮಾಡಿಕೊಂಡವರು. ವಿದ್ಯಾರ್ಥಿನಿ ಪೋಷಕರು ನೀಡಿದ ದೂರಿನ ಅನ್ವಯ ಅದೇ ಗ್ರಾಮದ ಕಾಶಪ್ಪ ನರಸಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ.
ಕಾಶಪ್ಪ ಅವರು ಯುವತಿಯ ಹಿಂದೆ ಬಿದ್ದು ಮದುವೆ ಆಗುವಂತೆ ಪೀಡಿಸುತ್ತಿದ್ದ. ಇದರಿಂದ ಬೇಸತ ವಿದ್ಯಾರ್ಥಿನಿ ಮನೆಯ ಕೋಣೆಯಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.














