ನವದೆಹಲಿ: ನಕಲಿ ಆಧಾರ್ ಕಾರ್ಡ್ ತೋರಿಸಿ ಹೆಚ್ಚಿನ ಭದ್ರತೆ ಹೊಂದಿರುವ ಸಂಸತ್ತಿನ ಸಂಕೀರ್ಣಕ್ಕೆ ಪ್ರವೇಶಿಸಲು ಯತ್ನಿಸಿದ ಮೂವರನ್ನು ಭದ್ರತಾ ಸಿಬಂದಿಗಳು ವಶಕ್ಕೆ ಪಡೆದಿರುವ ಘಟನೆ ಜೂನ್ 4ರಂದು ನಡೆದಿದ್ದು ಇದೀಗ ಬೆಳಕಿಗೆ ಬಂದಿದೆ.
ಕಾರ್ಮಿಕರೆಂದು ಹೇಳಿಕೊಂಡು ನಕಲಿ ಆಧಾರ್ ಕಾರ್ಡ್ ತೋರಿಸಿ ಸಂಸತ್ ಒಳಗೆ ಪ್ರವೇಶಿಸಲು ಯತ್ನಿಸಿದ್ದಾರೆ ಆದರೆ ಭದ್ರತಾ ಸಿಬಂದಿಗಳು ದಾಖಲೆಗಳನ್ನು ಪರಿಶೀಲಿಸಿದಾಗ ನಕಲಿ ಎಂಬುದು ಬೆಳಕಿಗೆ ಬಂದಿದೆ ಈ ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಪ್ರದೇಶ ಮೂಲದ ಮೂವರನ್ನು ಬಂಧಿಸಿದ್ದಾರೆ.
ದೆಹಲಿ ಪೊಲೀಸರು ಫೋರ್ಜರಿ ಮತ್ತು ವಂಚನೆ ಆರೋಪದ ಮೇಲೆ ಮೂವರು ಆರೋಪಿಗಳಾದ ಕಾಸಿಂ, ಮೋನಿಸ್ ಮತ್ತು ಸೋಯೆಬ್ ಅವರನ್ನು ಬಂಧಿಸಿದ್ದಾರೆ. ಮಂಗಳವಾರ ಸಂಸತ್ ಭವನದ ಗೇಟ್ ನಂಬರ್ ಮೂರರಲ್ಲಿ ಭದ್ರತಾ ತಪಾಸಣೆಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗ ಮೂವರನ್ನು ಸಿಐಎಸ್ಎಫ್ ಸಿಬ್ಬಂದಿ ತಡೆದು ತಪಾಸಣೆ ನಡೆಸಿದ ವೇಳೆ ಅವರ ಬಳಿ ನಕಲಿ ಆಧಾರ್ ಕಾರ್ಡ್ ಇರುವುದು ಬೆಳಕಿಗೆ ಬಂದಿದೆ.
ಬಂಧಿತರು ಡೀ ವೀ ಪ್ರಾಜೆಕ್ಟ್ ಲಿಮಿಟೆಡ್ ನಿಯೋಜಿಸಿರುವ ಗುತ್ತಿಗೆ ನೌಕರರಾಗಿದ್ದು ಎಂದು ಹೇಳಲಾಗುತ್ತಿದ್ದು, ಬಂಧಿತರ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 19/465/468/471/120B ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದ್ದು ತನಿಖೆ ನಡೆಯುತ್ತಿದೆ.
ಕೆಲ ತಿಂಗಳ ಹಿಂದೆ ಮೈಸೂರು ಮಾಜಿ ಸಂಸದ ಪ್ರತಾಮ್ ಸಿಂಹ ಅವರಿಂದ ಪಾಸ್ ಪಡೆದುಕೊಂಡು ಸಂಸತ್ ಪ್ರವೇಶಿಸಿಡಾ ವ್ಯಕ್ತಿಗಳು ಲೋಕಸಭೆ ಕಲಾಪದ ವೇಳೆ ಅಶ್ರುವಾಯು ಸಿಡಿಸಿದ್ದ ಪ್ರಕರಣದ ನೆನಪು ಪೂರ್ಣ ಮಾಸುವ ಮುನ್ನವೇ ಈ ಘಟನೆ ಬೆಳಕಿಗೆ ಬಂದಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.