ಮನೆ ಅಪರಾಧ ಗೆಳೆಯನ ಮೇಲೆ ಹಲ್ಲೆ ಪ್ರಕರಣ: 7 ಮಂದಿಯ ಬಂಧನ

ಗೆಳೆಯನ ಮೇಲೆ ಹಲ್ಲೆ ಪ್ರಕರಣ: 7 ಮಂದಿಯ ಬಂಧನ

0

ಬೆಂಗಳೂರು: ಬೆಂಗಳೂರಿನಲ್ಲಿ ಸಿಗರೇಟ್ ವಿಚಾರಕ್ಕೆ ಗೆಳೆಯನ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ 7 ಆರೋಪಿಗಳನ್ನು ಕಾಡುಗೋಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

Join Our Whatsapp Group

ವಿಶಾಲ್, ಆಕಾಶ್, ಸಂತೋಷ್, ಸುರೆಂದರ್ ಸೇರಿ 7 ಜನರನ್ನು ಅರೆಸ್ಟ್ ಮಾಡಲಾಗಿದೆ.

ಆರೋಪಿಗಳು ಡೀಗರ್ ಅಲಿಯಾಸ್ ಧನಂಜಯ್ ಎಂಬ ಯುವಕನ ಮೇಲೆ ದೊಣ್ಣೆ, ಕಲ್ಲು, ಬೆಲ್ಟ್, ಕ್ರೇಟ್​ ನಿಂದ ಹಲ್ಲೆ ಮಾಡಿದ್ದರು. ಅರೆಬೆತ್ತಲು ಮಾಡಿ ಯುವಕನನ್ನು ಹಿಗ್ಗಾಮುಗ್ಗಾ ಥಳಿಸಿದ್ದರು. ಹೋಟೆಲ್ ಮ್ಯಾನೇಜರ್ ದೂರಿನ ಮೇರೆಗೆ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿಗಳು ಮತ್ತು ಹಲ್ಲೆಗೊಳಗಾದ ಧನಂಜಯ್ ಎಲ್ಲರೂ ಹೋಟೆಲ್​ ನಲ್ಲಿ ಕೆಲಸ ಮಾಡ್ತಿದ್ದರು. ಹಲ್ಲೆಗೊಳಗಾದ ಯುವಕ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ.

ಸದ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.