ಉಳ್ಳಾಲ: ವಿಜಯೋತ್ಸವದಲ್ಲಿ ಭಾಗವಹಿಸಿದ್ದ ಬಿಜೆಪಿ ಕಾರ್ಯಕರ್ತರಿಬ್ಬರಿಗೆ ತಂಡವೊಂದು ಚೂರಿಯಿಂದ ಇರಿದ ಘಟನೆ ಕೊಣಾಜೆ ಠಾಣೆ ವ್ಯಾಪ್ತಿಯ ಬೋಳಿಯಾರು ಸಮೀಪ ರವಿವಾರ ರಾತ್ರಿ ನಡೆದಿದೆ.
ಗಾಯಾಳುಗಳನ್ನು ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನೋಳಿ ಧರ್ಮನಗರದ ಹರೀಶ್ ಹಾಗೂ ನಂದನ್ ಕುಮಾರ್ ಗಾಯ ಗೊಂಡವರು.
ಘಟನೆಯ ವಿವರ
ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದ ಮತ್ತು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರ ವಿಜಯೋತ್ಸವದ ಅಂಗವಾಗಿ ಬೋಳಿಯಾರು ಬಿಜೆಪಿ ಗ್ರಾಮಸಮಿತಿ ವತಿಯಿಂದ ಚೇಳೂರು, ಬೋಳಿಯಾರು ಮಾರ್ಗವಾಗಿ ಧರ್ಮನಗರದ ವರೆಗೆ ವಿಜಯೋತ್ಸವ ಮೆರವಣಿಗೆ ಆಯೋಜಿಸಲಾಗಿತ್ತು.
ರ್ಯಾಲಿ ಮುಗಿಸಿ ಮನೆಗೆ ತೆರಳಿದ್ದ ಹರೀಶ ಮತ್ತು ನಂದನ್ ಅಂಗಡಿಯಿಂದ ಯಾವುದೋ ಸಾಮಗ್ರಿ ಖರೀದಿಸಿ ತರಲೆಂದು ಬೋಳಿಯಾರು ಕ್ರಾಸ್ನತ್ತ ಮರಳಿ ಬಂದಿದ್ದರು. ಮನೆಗೆ ಮರಳು ವಾಗ ಅವರು ಕೇಸರಿ ಶಾಲು ಧರಿಸಿದ್ದನ್ನು ನೋಡಿದ ತಂಡವೊಂದು ತಡೆದು ಬೆದರಿಸಿದ್ದಲ್ಲದೆ ಬೈಕಿನ ಮುಂದೆ ಹರೀಶ್ ಅವರ ಹೊಟ್ಟೆಗೆ ಮತ್ತು ನಂದನ್ ಅವರ ಬೆನ್ನಿಗೆ ಚೂರಿಯಿಂದ ಇರಿಯಿತು. ಬಳಿಕ ಕೃತ್ಯ ಎಸಗಿದ ತಂಡ ಪರಾರಿಯಾಗಿದೆ. ಘಟನೆಯಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನೆಲೆಸಿದೆ.
ಬೋಳಿಯಾರು ನಿವಾಸಿ ಪಿಕಪ್ ಚಾಲಕ ಕೃತ್ಯ ಎಸಗಿರುವುದಾಗಿ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆರೋಪಿಗಳಿಗೆ ಶೋಧ ಕಾರ್ಯ ಮುಂದುವರಿದಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.