ಮನೆ ಕಾನೂನು ಸ್ಥಳ ಮಹಜರು: ರೇಣುಕಾಸ್ವಾಮಿ ಶವ ಎಸೆದಿದ್ದ ಜಾಗ ತೋರಿಸಿದ ಆರೋಪಿಗಳು

ಸ್ಥಳ ಮಹಜರು: ರೇಣುಕಾಸ್ವಾಮಿ ಶವ ಎಸೆದಿದ್ದ ಜಾಗ ತೋರಿಸಿದ ಆರೋಪಿಗಳು

0

ಬೆಂಗಳೂರು: ಚಿತ್ರದುರ್ಗದ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಶರವೇಗದಲ್ಲಿ ಸಾಗಿದೆ.

Join Our Whatsapp Group

ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 13 ಜನರನ್ನು ಬಂಧಿಸಿರುವ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಇಂದು ಆರೋಪಿಗಳನ್ನು ಕರೆದೊಯ್ದು ಸ್ಥಳ ಮಹಜರು ಪ್ರಕ್ರಿಯೆ ನಡೆಸಿದ್ದಾರೆ.

ರೇಣುಕಾಸ್ವಾಮಿ ಮೃತದೇಹವನ್ನು ಬಿಸಾಡಿದ್ದ ಸ್ಥಳಕ್ಕೆ ನಾಲ್ಕು ಜನ ಆರೋಪಿಗಳನ್ನು ಪೊಲೀಸರು ಕರೆದೊಯ್ದರು. ಈ ವೇಳೆ, ಹತ್ಯೆ ಮಾಡಿದ ಸ್ಥಳವನ್ನು ಆರೋಪಿಗಳು ಪೊಲೀಸರಿಗೆ ತೋರಿಸಿದ್ದಾರೆ.