ಮನೆ ಅಪರಾಧ ಕಾವೇರಿ ನದಿಯಲ್ಲಿ ಮುಳುಗಿ ಯುವಕರಿಬ್ಬರ ದುರ್ಮರಣ

ಕಾವೇರಿ ನದಿಯಲ್ಲಿ ಮುಳುಗಿ ಯುವಕರಿಬ್ಬರ ದುರ್ಮರಣ

0

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋದಾಗ ನೀರಿನಲ್ಲಿ ಮುಳುಗಿ ಯುವಕರಿಬ್ಬರ ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣದ ಗಂಜಾಮ್ ಸಮೀಪದ ನಿಮಿಷಾಂಭ ದೇಗುಲ ಬಳಿ ನಡೆದಿದೆ.

Join Our Whatsapp Group

ಬೆಂಗಳೂರು ಮತ್ತು ತಮಿಳುನಾಡು ಮೂಲದ ವಿಶಾಲ್ (19) ರೋಹಣ್ (17) ಮೃತ ಯುವಕರು.

ಮೈಸೂರಿನ ಅಜ್ಜಿ ಮನೆಗೆ ಬಂದು ಕುಟುಂಬದ ಜೊತೆ ಯುವಕರು ದೇಗುಲಕ್ಕೆ ಬಂದಿದ್ದರು.  ಈ ವೇಳೆ ಕಾವೇರಿ ನದಿಯಲ್ಲಿ ಈಜಲು ಹೋದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.