ಹುಣಸೂರು: ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರೈತರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ನಡೆದಿದೆ.
ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ವದ್ಲಿಮನುಗನಹಳ್ಳಿಯ ಲೇ.ಜವರೇಗೌಡರ ಪುತ್ರ ಅಣ್ಣೇಗೌಡ(57) ಮೃತ ರೈತ. ಇವರಿಗೆ ಪತ್ನಿ, ಇಬ್ಬರು ಹೆಣ್ಣು, ಒಬ್ಬ ಮಗನಿದ್ದಾನೆ.
ಘಟನೆಯ ವಿವರ: ಅಣ್ಣೇಗೌಡರಿಗೆ ಗ್ರಾಮದಲ್ಲಿ 3 ಎಕರೆ ಜಮೀನಿದ್ದು, ತಂಬಾಕು ಮತ್ತಿತರ ಬೆಳೆ ಬೆಳೆಯುತ್ತಿದ್ದರು. ಕೃಷಿ ಚಟುವಟಿಕೆಗಾಗಿ ಪಂಚವಳ್ಳಿಯ ಐಓಬಿ ಬ್ಯಾಂಕ್ನಲ್ಲಿ 10 ಲಕ್ಷ ಸಾಲ ಪಡೆದಿದ್ದು, ಸುಸ್ತಿದಾರರಾಗಿದ್ದರು. ಖಾಸಗಿ ಫೈನಾನ್ಸ್ 14 ಲಕ್ಷ ರೂ. ಹಾಗೂ 5 ಲಕ್ಷ ಕೈಸಾಲ ಮಾಡಿಕೊಂಡಿದ್ದರು. ಬೆಳೆ ಕೈ ಹತ್ತದೆ ಸಾಲ ತೀರಿಸಲಾಗದೆ ಚಿಂತಿತರಾಗಿದ್ದ ಇವರು ಬುಧವಾರ ಮನೆಯಿಂದ ಹೊರಗೆ ಹೋಗಿದ್ದವರು ಮರಳಿರಲಿಲ್ಲ.
ಬುಧವಾರ ಗ್ರಾಮದ ಗೆಂಡೆ ಕೆರೆಯಲ್ಲಿ ಅಣ್ಣೇಗೌಡರ ಶವ ತೇಲುತ್ತಿರುವ ಬಗ್ಗೆ ಗ್ರಾಮಸ್ಥರು ಮನೆಯವರಿಗೆ ಮಾಹಿತಿ ನೀಡಿದ ಮೇರೆಗೆ ಪುತ್ರ ಶಶಿಕುಮಾರ್ ತಮ್ಮ ತಂದೆ ಸಾಲಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.
ಪೊಲೀಸರ ಸಮ್ಮುಖದಲ್ಲಿ ಶವ ಮೇಲೆತ್ತಿ, ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಿದ್ದು, ಸಂಜೆ ಅಂತ್ಯ ಸಂಸ್ಕಾರ ನಡೆಸಲಾಯಿತು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.