ಗುಂಡ್ಲುಪೇಟೆ: ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ (ಆರ್. ಎಲ್. ಎಚ್. ಪಿ) ಮೈಸೂರು ಇವರ ವತಿಯಿಂದ ಗುಂಡ್ಲುಪೇಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ ಹದಿಹರೆಯದ ಯುವಕ ಯುವತಿಯರಿಗಾಗಿ ಕಂಪ್ಯೂಟರ್ ತರಬೇತಿ ಕೇಂದ್ರವನ್ನು ಆರಂಭಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಸರಸ್ವತಿ ಇವರು ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆಯು ಕಳೆದ 40 ವರ್ಷಗಳಿಂದ ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಗುಂಡ್ಲುಪೇಟೆ ತಾಲೂಕಿನಲ್ಲಿ ಕಳೆದ ಎರಡು ವರ್ಷಗಳಿಂದ ಬಾಲ್ಯ ವಿವಾಹ ನಿಷೇಧಿಸಲು ಹದಿಹರೆಯದ ಹೆಣ್ಣು ಮಕ್ಕಳಿಗೆ ಗುಂಪುಗಳನ್ನು ಮಾಡಿ ಅವರಿಗೆ ಶಿಕ್ಷಣದ ಮನವರಿಕೆ ಮಾಡಿ ಬಾಲ್ಯ ವಿವಾಹ ಆಗದಂತೆ ತಡೆಗಟ್ಟ ಬೇಕೆಂಬುದು ಪ್ರಮುಖ ಉದ್ದೇಶವಾಗಿದೆ.
ಪ್ರಸ್ತುತ ದಿನಮಾನಗಳಲ್ಲಿ ಕಂಪ್ಯೂಟರ್ ಜ್ಞಾನವು ಅತಿ ಅವಶ್ಯಕವಾಗಿದ್ದು ಶಿಕ್ಷಣದೊಂದಿಗೆ ಕಂಪ್ಯೂಟರ್ ಕೌಶಲ್ಯವು ಸಹ ಅತ್ಯವಶ್ಯವಾಗಿದೆ. ನಾವು ಕಾರ್ಯನಿರ್ವಹಿಸುವ ಬಡ ಕುಟುಂಬಗಳಲ್ಲಿ ಕಂಪ್ಯೂಟರ್ ಕಲಿಯಲು ತಿಂಗಳಿಗೆ 2000-3000 ಕಟ್ಟಬೇಕಾಗಿರುತ್ತದೆ. ಆದರೆ ಇದು ಕಷ್ಟವಾಗುತ್ತದೆ ಮತ್ತು ಪೋಷಕರು ಇದನ್ನು ನಿರಾಕರಿಸುತ್ತಾರೆ. ಆದುದರಿಂದ ಉಚಿತವಾಗಿ ಅದೇ ಹೃದಯದ ಯುಗ ಯುವತಿಯರಿಗೆ ಕಂಪ್ಯೂಟರ್ ತರಬೇತಿ ನೀಡಲು ಇದನ್ನು ಆರಂಭಿಸಲಾಗಿದೆ ಇದನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶ್ರೀ ಗುರುಪ್ರಸಾದ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಶ್ರೀ ಅಣ್ಣಯ್ಯ ಗ್ರಾಮ ಪಂಚಾಯಿತಿ, ಗ್ರಾಮದ ಮುಖಂಡರು, ಸಂಸ್ಥೆಯ ಸಂಯೋಜಕರು ಮತ್ತು ಕಂಪ್ಯೂಟರ್ ತರಬೇತಿ ಪಡೆಯುವ ಮಕ್ಕಳು ಉಪಸ್ಥಿತರಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.