ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ವಿಚಾರಕ್ಕೆ ಸಂಬಂಧಿಸಿ ಬಕ್ರೀದ್ ಹಿಂದಿನ ದಿನ ಜನರನ್ನು ಬಕ್ರಾ ಮಾಡಲು ಬೆಲೆ ಏರಿಕೆ ಮಾಡಲಾಗಿದೆ. ಊಸರವಳ್ಳಿಗೂ ನಿಮಗೂ ಸರ್ಧೆ ಮಾಡಿದರೆ ಗೆಲ್ಲೋದು ನೀವೆ ಎಂದು ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದು ಈ ವೇಳೆ ಸಿ.ಟಿ.ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಕ್ತದ ರುಚಿ ನೋಡಿದ ಹುಲಿ ಮತ್ತೆ ಮತ್ತೆ ಅದನ್ನೇ ಬಯಸುತ್ತದೆ. ಆಡಳಿತಕ್ಕೆ ಬಂದ ಕೂಡಲೇ ಗೋಸುಂಬೆ ಕೂಡ ನಾಚುವ ರೀತಿ ಬೆಲೆ ಏರಿಸಿ ಕೇಂದ್ರ ಕಡೆ ಬೊಟ್ಟು ಮಾಡಿದ್ದೀರಿ ಮುಖ್ಯಮಂತ್ರಿಗಳೇ? ಊಸರವಳ್ಳಿಗೂ ನಿಮಗೂ ಸ್ಪರ್ಧೆ ಇರಿಸಿದರೆ ಗೆಲ್ಲುವುದು ನೀವೇ. ಜಿಎಸ್ಟಿ ಜೊತೆ YST ತಂದ್ರಿ, ಜೊತೆಗೆ ಡಿಕೆ ಟ್ಯಾಕ್ಸ್ ಕೂಡ ಇದೆ. ನಿಮ್ಮದು ನಾಲಗೆಯಾ ಏನೂ ಅಂತಾ ಪ್ರಶ್ನೆ ಮಾಡಬೇಕಾಗುತ್ತೆ. ನಿಮ್ಮದು ನಾಲಿಗೆ ಅಲ್ಲ ಎಕ್ಕಡಕ್ಕಿಂತ ಕಡೆ ಅಂತಾ ಜನ ಹೇಳುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಂಎಲ್ಸಿ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರವಿರುವ 3 ಕಡೆಯೂ ಜನರಿಗೆ ನಾಮ ಹಾಕ್ತಾರೆ. ಬಕ್ರೀದ್ ದಿನ ಸಿಎಂ ಮಾತ್ರ ಟೋಪಿ ಹಾಕಿಕೊಳ್ತಾರೆ ಅಂದುಕೊಂಡಿದ್ವಿ. ಆದ್ರೆ ಇವರು ಎಲ್ಲರಿಗೂ ಟೋಪಿ ಹಾಕಿದ್ದಾರೆ. ಚೊಂಬು ಆದರೂ ಯಾವುದಕ್ಕಾದರೂ ಉಪಯೋಗಕ್ಕೆ ಬರುತ್ತದೆ. ಆದರೆ ಕಾಂಗ್ರೆಸ್ ನಾಯಕರು ಕೊಡುವುದು ಹಳೆಯ ಚಿಪ್ಪು. ಚಿಪ್ಪು ಕೂಡ ಮೂರು ತೂತು, ಇವರ ಸರ್ಕಾರವೂ ತೂತು. ಸಂಗ್ರಹ ಮಾಡಿದ ಹಣವೆಲ್ಲಾ ರಾಹುಲ್ ಗಾಂಧಿಗೆ ಹೋಗುತ್ತಿದೆ. ಬೆಲೆ ಇಳಿಸಬೇಕು ಇಲ್ಲಾ ಅವರೇ ಇಳಿಯಬೇಕು. ಇಳಿಯದಿದ್ದರೆ ಹೇಗೆ ಇಳಿಸಬೇಕು ಅಂತಾ ನಮಗೆ ಗೊತ್ತಿದೆ. ನುಂಗಣ್ಣ, ನುಂಗಣ್ಣ ಅಂತಾ ನುಂಗುವ ಕೆಲಸ ಒಂದೇ ಮಾಡ್ತಿದ್ದಾರೆ ಎಂದು ಸಿ.ಟಿ.ರವಿ ಕಿಡಿಕಾರಿದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.