ಬೆಂಗಳೂರು: ಸಹಾಯ ಕೇಳಿ ಕೊಂಡು ತಾಯಿಯ ಜತೆ ಬಂದ ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ಸಿಐಡಿಯಿಂದ ಸುದೀರ್ಘ ವಿಚಾರಣೆ ಎದುರಿಸಿದರು.
ಅರಮನೆ ರಸ್ತೆಯ ಕಾರ್ಲಟನ್ ಹೌಸ್ ಕಟ್ಟಡದಲ್ಲಿರುವ ಸಿಐಡಿ ಕಚೇರಿಯಲ್ಲಿ ಪ್ರಕರಣದ ತನಿಖಾಧಿಕಾರಿ ಡಿವೈಎಸ್ಪಿ ಪುನೀತ್ ಅವರು ಬಿಎಸ್ವೈ ಅವರನ್ನು ಸುಮಾರು ಮೂರೂವರೆ ತಾಸು ಕಾಲ ವಿಚಾರಣೆ ನಡೆಸಿ ದರು. ಘಟನೆ ದಿನ ಮನೆಯಲ್ಲಿ ಏನಾಯಿತು, ದೂರುದಾರ ಮಹಿಳೆ, ಸಂತ್ರಸ್ತೆ ತಮಗೆ ಹೇಗೆ ಪರಿಚಯ ಸೇರಿ ಹತ್ತಾರು ಪ್ರಶ್ನೆಗಳನ್ನು ಕೇಳಿದರು.
ಅದಕ್ಕೆ ಉತ್ತರಿಸಿದ ಯಡಿಯೂರಪ್ಪ, ನನಗೂ ದೂರುದಾರ ಮಹಿಳೆ ಹಾಗೂ ಆಕೆಯ ಪುತ್ರಿಗೂ ಪರಿಚಯವಿಲ್ಲ. ನಾನು ಸಾರ್ವಜನಿಕ ಜೀವನದಲ್ಲಿ ಇರುವುದರಿಂದ ಸಹಾಯ ಕೇಳಿ ನಿತ್ಯ ಹಲವು ಜನರು ಮನೆ ಬಳಿ ಬರುತ್ತಾರೆ. ಅವರನ್ನು ಮಾತನಾಡಿಸಿ ಕೈಲಾದ ಸಹಾಯ ಮಾಡುತ್ತೇವೆ. ಹಾಗೆಯೇ ಅಂದು ಮಹಿಳೆ ಹಾಗೂ ಆಕೆಯ ಮಗಳು ನಮ್ಮ ಮನೆಗೆ ಬಂದು ಸಹಾಯ ಕೇಳಿದ್ದರು. ಈ ವೇಳೆ ಅವರನ್ನು ಮನೆಯಲ್ಲಿ ಕುಳ್ಳಿರಿಸಿ ಸಮಸ್ಯೆ ಆಲಿಸಿದೆ. ಸೌಜನ್ಯದಿಂದ ಮಾತನಾಡಿ ಕಳುಹಿಸಿ ಕೊಟ್ಟೆ. ಅಪ್ರಾಪ್ತ ವಯಸ್ಕಳ ತಾಯಿ ಹೇಳಿದಂತೆ ಯಾವುದೇ ದೌರ್ಜನ್ಯ ಎಸಗಿಲ್ಲ ಎಂದು ಉತ್ತರಿಸಿದ್ದಾರೆ ಎಂದು ತಿಳಿದುಬಂದಿದೆ.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.