ಭಾಲ್ಕಿ: ಅಂಗನವಾಡಿ ಕಾರ್ಯಕರ್ತರು ತಮ್ಮ ಹುದ್ದೆಯ ಬಗ್ಗೆ ಆತಂಕ ಪಡುವ ಅವಶ್ಯಕತೆ ಇಲ್ಲ. ಸರ್ಕಾರ ಅಂಗನವಾಡಿ ಕಾರ್ಯಕರ್ತರ ಬೆನ್ನಿಗೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಪಟ್ಟಣದ ಖಂಡ್ರೆ ನಿವಾಸದಲ್ಲಿ ನಡೆದ ಅಂಗನವಾಡಿ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಮನವಿ ಪತ್ರ ಸ್ವೀಕರಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ಅಂಗನವಾಡಿ ಕಾರ್ಯಕರ್ತರ ಪರವಾಗಿದೆ. ಅಂಗನವಾಡಿ ಕೇಂದ್ರ ಪ್ರಾರಂಭವಾಗಿದ್ದೇ, ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ. ಮಹಿಳೆಯರಿಗಾಗಿ ಸ್ತ್ರೀಶಕ್ತಿ, ಗ್ರಹಲಕ್ಷ್ಮಿ, ಶಕ್ತಿ ಯೋಜನೆ ಸೇರಿದಂತೆ ಹಲವಾರು ಕಾರ್ಯಕ್ರಮಗಳು ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ನಿಮ್ಮ ಆತಂಕ, ಯುಕೆಜಿ, ಎಲ್ಕೆಜಿಯಿಂದ ಅಂಗನವಾಡಿ ಮುಚ್ಚುತ್ತವೆ ಎಂದು. ಆದರೆ ಕರ್ನಾಕಟ ಸರ್ಕಾರ ಯಾವ ಅಂಗನವಾಡಿ ಕೇಂದ್ರಗಳನ್ನೂ ಮುಚ್ಚಲು ಬಿಡುವುದಿಲ್ಲ ಎಂದು ಅಂಗನವಾಡಿ ಕಾರ್ಯಕರ್ತರಲ್ಲಿ ಆತ್ಮಿ ವಿಶ್ವಾಸ ತುಂಬಿದರು.
ಬಡವರ ಮಕ್ಕಳು ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಯುಕೆಜಿ, ಎಲ್ಕೆಜಿ ಶಿಕ್ಷಣ ಪಡೆಯಲು ಆಗುವುದಿಲ್ಲ ಎನ್ನುವ ಹಿತದೃಷ್ಟಿಯಿಂದ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ಅಂಗನವಾಡಿ ಕಾರ್ಯಕರ್ತರಿಗೆ ಯಾವುದೇ ತೊಂದರೆ ಯಾಗದಂತೆ ಕಾರ್ಯಕ್ರಮ ರೂಪಿಸುವುದಾಗಿ ಭರವಸೆ ನೀಡಿದರು.
ಇದೇವೇಳೆ ಸತತವಾಗಿ ಸುರಿಯುತ್ತಿರುವ ಮಳೆಯಲ್ಲಿಯೂ ಅಂಗನವಾಡಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಿಸಿದ್ದರು. ಪೊಲೀಸ್ ಇಲಾಖೆ ಅಂಗನವಾಡಿ ಕಾರ್ಯಕರ್ತರಿಗೆ ಟೆಂಟ್ ವ್ಯವಸ್ಥೆ ಮಾಡಿ ಸಹಾಯ ಹಸ್ತ ಚಾಚಿದರು.
ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತರ ಜಿಲ್ಲಾಧ್ಯಕ್ಷೆ ಸುಶೀಲಾ ಹತ್ತಿ ಸೇರಿದಂತೆ ನೂರಾರು ಅಂಗನವಾಡಿ ಕಾರ್ಯಕರ್ತರು ಹಾಜರಿದ್ದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.