ಚಿಕ್ಕಮಗಳೂರು: ಎನ್.ಆರ್.ಪುರ ತಾಲೂಕಿನ ಬೈರಾಪುರದ ಭದ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ನಿರುಪಾಲಾಗಿದ್ದ ಶಿವಮೊಗ್ಗ ಮೂಲದ ಮೂವರ ಮೃತದೇಹ ಗುರುವಾರ ಪತ್ತೆಯಾಗಿದೆ.
ಮೃತರನ್ನು ಶಿವಮೊಗ್ಗ ಜಿಲ್ಲೆಯ ವಿದ್ಯಾನಗರ ನಿವಾಸಿಗಳಾದ ಆದೀಲ್, ಸಾಜೀದ್ ಹಾಗೂ ಅಫ್ದಾಖಾನ್ ಎಂದು ಗುರುತಿಸಲಾಗಿದೆ.
ಬುಧವಾರ ಶಿವಮೊಗ್ಗದ ವಿದ್ಯಾನಗರದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು ಜಿಲ್ಲೆಯ ಬೈರಾಪುರದಲ್ಲಿರುವ ಭದ್ರಾ ಹಿನ್ನೀರಿನ ಬಳಿ ಬಂದಿದ್ದಾರೆ, ಈ ವೇಳೆ ನಾಲ್ವರಲ್ಲಿ ಮೂವರು ತೆಪ್ಪದಲ್ಲಿ ತೆರಳಿದ್ದಾರೆ ಓರ್ವ ಮಾತ್ರ ದಡದಲ್ಲಿ ನಿಂತಿದ್ದ ಎನ್ನಲಾಗಿದೆ ತೆಪ್ಪದಲ್ಲಿ ತೆರಳಿದ ಕೆಲವೇ ಹೊತ್ತಿನಲ್ಲಿ ತೆಪ್ಪ ಮುಳುಗಿ ಮೂವರು ನಿರುಪಾಲಾಗಿದ್ದರು, ಘಟನೆ ಸಂಬಂಧ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇತ್ತ ಮೂವರು ನೀರು ಪಾಲಾಗಿರುವ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳೀಯರು ಹಾಗೂ ಪೊಲೀಸರು ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ಘಟನಾ ಸ್ಥಳಕ್ಕೆ ಬಂದು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ ಆದರೆ ಕತ್ತಲಾದರೂ ಮೂವರ ದೇಹಗಳು ಪತ್ತೆಯಾಗಲಿಲ್ಲ ಬಳಿಕ ಕಾರ್ಯಾಚರಣೆ ಸ್ಥಗಿತಗೊಳಿಸಿ ಗುರುವಾರ ಮತ್ತೆ ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬಂದಿಗಳು ಕಾರ್ಯಾಚರಣೆ ನಡೆಸಿ ಮೂವರ ಮೃತದೇಹಗಳನ್ನು ಮೇಲಕ್ಕೆತ್ತಿದ್ದಾರೆ.
ಮೃತದೇಹಗಳನ್ನು ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಶವಗಾರಕ್ಕೆ ರವಾನೆ ಮಾಡಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.