ಕಲಬುರಗಿ: ನಗರದ ಹೋಟೆಲೊಂದರಲ್ಲಿ ಕಿಚನ್ ನಲ್ಲಿ ಸಿಲಿಂಡರ್ ಸ್ಪೋಟಗೊಂಡು ಹತ್ತು ಮಂದಿ ಗಾಯಗೊಂಡ ಘಟನೆ ಶುಕ್ರವಾರ (ಜೂನ್ 21) ಬೆಳಂಬೆಳಿಗ್ಗೆ ನಡೆದಿದೆ.
ನಗರದ ಶರಣಬಸವೇಶ್ವರ ಕೆರೆ ಹತ್ತಿರದ ಸಪ್ತಗಿರಿ ಹೋಟೆಲ್ ನಲ್ಲಿ ಸಿಲೆಂಡರ್ ಸ್ಪೋಟವಾಗಿದ್ದು, ಇದರಲ್ಲಿ ಹತ್ತಕ್ಕೂ ಜನ ಗಾಯಗೊಂಡಿದ್ದಾರೆ. ಇವರಲ್ಲಿ ಐದು ಜನರ ಸ್ಥಿತಿ ಚಿಂತಾಜನಕವಾಗಿದೆ.
ಸಿಲಿಂಡರ್ ಸ್ಫೋಟದಿಂದ ಹೋಟೆಲ್ ಗೋಡೆಗೂ ಧಕ್ಕೆಯಾಗಿದೆಯಲ್ಲದೆ ಹೋಟೆಲ್ ನ ಕಿಟಕಿಗಳು ಹಾನಿಗೊಳಗಾಗಿವೆ. ಸ್ಫೋಟದ ಭೀಕರತೆ ಎಷ್ಟಿತ್ತೆಂದರೆ ಹೋಟೆಲ್ ಪಕ್ಕದ ಮನೆಗಳ ಕಿಟಕಿಗಳು ಸಹ ಹಾನಿಗೊಳಪಟ್ಟಿವೆ.
ಘಟನೆ ಅರಿಯುತ್ತಿದ್ದಂತೆ ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಗಾಯಾಳುಗಳನ್ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಸಿಲೆಂಡರ್ ಬ್ಲಾಸ್ಟ್ ಪ್ರಕರಣದಲ್ಲಿ ಹರಿಯಾಣ ಮೂಲದ ಸತ್ಯವಾನ್ ಶರ್ಮ (55), ಯುಪಿ ಮೂಲದ ರಾಕೇಶ್ (45), ಮಹೇಶ್ ಕುದುಮುಡು (40), ವಿಠ್ಠಲ್ ಕೊಡಲ್ (42), ಗುರುಮೂರ್ತಿ, ಅಪ್ಪರಾಯ್, ಮಲ್ಲಿನಾಥ್, ಮಹೇಶ್, ಲಕ್ಷ್ಮಣ್, ರಾಕೇಶ್ ಗಾಯಗೊಂಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.