ಮಾಸ್ಕೋ: ರಷ್ಯಾದ ಉತ್ತರ ಕಾಕಸಸ್ ಪ್ರದೇಶದ ಡಾಗೆಸ್ತಾನ್ ನಲ್ಲಿ ಬಂದೂಕುಧಾರಿಗಳು ಪಾದ್ರಿ ಸೇರಿದಂತೆ 15 ಮಂದಿ ಪೊಲೀಸ್ ಅಧಿಕಾರಿಗಳನ್ನು ಹತ್ಯೆ ಮಾಡಿದ್ದಾರೆ ಎಂದು ಅಲ್ಲಿನ ಗವರ್ನರ್ ಸೆರ್ಗೆಯ್ ಮೆಲಿಕೋವ್ ಸೋಮವಾರ ಮುಂಜಾನೆ ವಿಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಡಾಗೆಸ್ತಾನ್ನ ಎರಡು ನಗರಗಳಲ್ಲಿನ ಆರ್ಥೊಡಾಕ್ಸ್ ಚರ್ಚ್ಗಳು ಮತ್ತು ಪೊಲೀಸ್ ಪೋಸ್ಟ್ಗಳ ಮೇಲೆ ಬಂದೂಕುಧಾರಿಗಳು ಭಾನುವಾರ ಗುಂಡಿನ ದಾಳಿ ನಡೆಸಿದ್ದಾರೆ. ಇದು ಅತ್ಯಂತ ದುರಂತ ಘಟನೆ’ ಎಂದು ಮೆಲಿಕೋವ್ ಹೇಳಿದ್ದಾರೆ.
ಮೃತರಲ್ಲಿ ಪೊಲೀಸ್ ಅಧಿಕಾರಿಗಳ ಜೊತೆಗೆ, 40 ವರ್ಷಗಳಿಗೂ ಹೆಚ್ಚು ಕಾಲ ಕೆಲಸ ಮಾಡಿದ ಆರ್ಥೊಡಾಕ್ಸ್ ಪಾದ್ರಿ ಸೇರಿದಂತೆ ಹಲವು ನಾಗರಿಕರೂ ಸೇರಿದ್ದಾರೆ ಎಂದು ಮೆಲಿಕೋವ್ ತಿಳಿಸಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಡಾಗೆಸ್ತಾನ್ ಸರ್ಕಾರ ಜೂನ್ 24ರಿಂದ 26ರವರೆಗೆ ಶೋಕಾಚರಣೆ ಘೋಷಿಸಿ ಆದೇಶ ಮಾಡಿದೆ. ದಾಳಿಯ ಹೊಣೆಗಾರಿಕೆಯನ್ನು ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ.
ಭಯೋತ್ಪಾದಕ ಕೃತ್ಯದ ಆರೋಪದ ಮೇಲೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಅಧಿಕಾರಿಗಳು ಈ ಪ್ರದೇಶದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಕೈಗೊಂಡಿದ್ದು, ಐವರು ಬಂದೂಕುಧಾರಿಗಳನ್ನು ಹತ್ಯೆಗೈದಿದ್ದಾರೆ ಎಂದು ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ಸಮಿತಿಯನ್ನು ಉಲ್ಲೇಖಿಸಿ ರಷ್ಯಾದ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.