ಮನೆ ರಾಜ್ಯ ನಿಗಮ ಮಂಡಳಿಗಳಿಗೆ ನಿರ್ದೇಶಕರು,ಸದಸ್ಯರ ಆಯ್ಕೆಗೆ ಪರಮೇಶ್ವರ್ ನೇತೃತ್ವದಲ್ಲಿ ಸಮಿತಿ ರಚನೆ

ನಿಗಮ ಮಂಡಳಿಗಳಿಗೆ ನಿರ್ದೇಶಕರು,ಸದಸ್ಯರ ಆಯ್ಕೆಗೆ ಪರಮೇಶ್ವರ್ ನೇತೃತ್ವದಲ್ಲಿ ಸಮಿತಿ ರಚನೆ

0

ಬೆಂಗಳೂರು:ರಾಜ್ಯದ ವಿವಿಧ ನಿಗಮ -ಮಂಡಳಿಗಳಿಗೆ ನಿರ್ದೇಶಕರು ಮತ್ತು ಸದಸ್ಯರ ಆಯ್ಕೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

Join Our Whatsapp Group


ಈ ಆಯ್ಕೆ ಸಮಿತಿ ಸದಸ್ಯರಾಗಿ ಸಚಿವ ಸಂತೋಷ್ ಲಾಡ್, ಶಾಸಕ ರಿಜ್ವಾನ್ ಅರ್ಷದ್ ಅವರನ್ನು ನೇಮಕ ಮಾಡಲಾಗಿದೆ.
ಈ ಆಯ್ಕೆ ಸಮಿತಿಯು ಒಂದು ತಿಂಗಳೊಳಗೆ ನಿಗಮ -ಮಂಡಳಿಗಳ ನಿರ್ದೇಶಕರು, ಸದಸ್ಯರನ್ನು ಆಯ್ಕೆ ಮಾಡಿ ಪಟ್ಟಿ ಸಿದ್ಧಪಡಿಸಿ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.