ಮನೆ ಕಾನೂನು ಸನಾತನ ಧರ್ಮದ ಬಗ್ಗೆ ಹೇಳಿಕೆ: ಉದಯನಿಧಿ ಸ್ಟಾಲಿನ್​​ ಗೆ ಷರತ್ತುಬದ್ಧ ಜಾಮೀನು

ಸನಾತನ ಧರ್ಮದ ಬಗ್ಗೆ ಹೇಳಿಕೆ: ಉದಯನಿಧಿ ಸ್ಟಾಲಿನ್​​ ಗೆ ಷರತ್ತುಬದ್ಧ ಜಾಮೀನು

0

ಬೆಂಗಳೂರು: ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ​​​ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ​​ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

Join Our Whatsapp Group

ಸನಾತನ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಉದಯನಿಧಿ ಸ್ಟಾಲಿನ್​ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಪರಮೇಶ್​ ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ನ್ಯಾಯಾಲಯ ಅವರಿಗೆ ನೋಟಿಸ್​ ಜಾರಿ ಮಾಡಿತ್ತು. ಇಂದು (ಜೂ.25) ಉದಯನಿಧಿ ಸ್ಟಾಲಿನ್​ ನ್ಯಾಯಾಲಯಕ್ಕೆ ಜಾರಾಗಿದ್ದರು.

ಈ ವೇಳೆ ನ್ಯಾಯಾಲಯ ಪ್ರಕರಣದ ಉಳಿದ ಆರೋಪಿಗಳು ಎಲ್ಲಿ ಎಂದು ನ್ಯಾಯಾಧೀಶರ ಪ್ರಶ್ನೆ ಮಾಡಿದರು. ಇದಕ್ಕೆ ಉದಯನಿಧಿ ಸ್ಟಾಲಿನ್​ ಪರ ಹಿರಿಯ ವಕೀಲ ವಿಲ್ಸನ್ ಉತ್ತರಿಸಿ, ಉದಯನಿಧಿ ಸ್ಟಾಲಿನ್​ ಅವರಿಗೆ ಪ್ರಕರಣದಲ್ಲಿ ಖುದ್ದು ಹಾಜರಾತಿಯಿಂದ ವಿನಾಯಿತಿ‌ ನೀಡಬೇಕು. ದೇಶಾದ್ಯಂತ ಏಳು ಪ್ರಕರಣಗಳು ದಾಖಲಾಗಿವೆ. ಸ್ಟಾಲಿನ್​​ ಅವರು ಒಂದು ರಾಜ್ಯದ ಕ್ರೀಡಾ ಸಚಿವ. ಹೀಗಾಗಿ, ಅವರಿಗೆ ಖುದ್ದು ಹಾಜರಾತಿಯಿಂದ ವಿನಾಯಿತಿ‌ ನೀಡಬೇಕು. ಸುಪ್ರೀಂ ಕೋರ್ಟ್​ನಿಂದ ಅವರಿಗೆ ವಿನಾಯಿತಿ ಸಿಕ್ಕಿದೆ. ಇನ್ನೂ ಅದೇಶದ ಪ್ರತಿ ಲಭ್ಯವಾಗಿಲ್ಲ ಎಂದು ಮನವಿ ಮಾಡಿದರು.

ವಕೀಲರು ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿದ ನ್ಯಾಯಾಲಯ, ವಿಚಾರಣೆಯನ್ನು ಆಗಸ್ಟ್​ 8ಕ್ಕೆ ಮುಂದೂಡಿತು. ಇದರ ಒಳಗಾಗಿ ಸುಪ್ರೀಂ ಕೋರ್ಟ್ ಆದೇಶ ಪ್ರತಿ ಸಲ್ಲಿಕೆ ಮಾಡುವಂತೆ ಸೂಚಿಸಿತು. ಹಾಗೂ ಉದಯನಿಧಿ ಅವರಿಹೆ 1 ಲಕ್ಷ ಬಾಂಡ್​ ಶ್ಯೂರಿಟಿಯೊಂದಿಗೆ ಷರತ್ತುಬದ್ಧ ಜಾಮೀನು ನೀಡಿದೆ.

ಪ್ರಕರಣದ ಹಿನ್ನೆಲೆ

ಕಳೆದ ವರ್ಷ ಸೆಪ್ಟೆಂಬರ್​ 4ರಂದು ಚೆನ್ನೈನ ತೇನಂಪೇಟೆಯಲ್ಲಿ ನಡೆದಿದ್ದ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್ “ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಹಾಗೂ ಕರೋನಾ ಇದ್ದಂತೆ. ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿರುವ ಸನಾನ ಧರ್ಮವನ್ನು ನಿರ್ಮೂಲನೆ ಮಾಡಬೇಕು” ಎಂದು ಹೇಳಿದ್ದರು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು, ಹಿಂದೂ ಸಂಘಟನೆಗಳು ಖಂಡಿಸಿದ್ದವು.