ಬೆಂಗಳೂರು: ದಯವಿಟ್ಟು ಡಿಸಿಎಂ ಡಿಕೆ ಶಿವಕುಮಾರ್ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಮುಖ್ಯಮಂತ್ರಿ ಸಿದ್ದರಾಮಯ್ಯರ ಅವರಲ್ಲಿ ಮನವಿ ಮಾಡಿದರು.
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿಮಗೆ ಅನುಭವ ಇದೆ, ಸಿದ್ದರಾಮಯ್ಯನವರು ಮನಸ್ಸು ಮಾಡಿದರೆ ಮಾತ್ರ ಇದು ಸಾಧ್ಯ. ಹಾಗಾಗಿ ಸಿಎಂ ಸ್ಥಾನ ಡಿಕೆ ಶಿವಕುಮಾರ್ಗೆ ಅವರು ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಶ್ರೀಗಳು ಮನವಿ ಮಾಡಿದರು.
‘ಸಿದ್ದರಾಮಯ್ಯ ಸುಮ್ಮನೆ ಇದ್ದು ಅಧಿಕಾರಕ್ಕೆ ಬಂದರು’
ಏತನ್ಮಧ್ಯೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಚಂದ್ರಶೇಖರ ಸ್ವಾಮೀಜಿ, ಡಿಕೆ ಶಿವಕುಮಾರ್ ಸಿಎಂ ಆಗಬೇಕಾಗಿರುವುದು ಧರ್ಮ. ಅವರು ಹಣ ಖರ್ಚು ಮಾಡಿದ್ದಾರೆ, ಹೋರಾಟ ಮಾಡಿದ್ದಾರೆ. ಸಿದ್ದರಾಮಯ್ಯರು ಸುಮ್ಮನೆ ಇದ್ದು ಅಧಿಕಾರಕ್ಕೆ ಬಂದರು ಎಂದು ಹೇಳಿದರು. ಸಿದ್ದರಾಮಯ್ಯ ಬಿಟ್ಟರೆ ಡಿಕೆ ಶಿವಕುಮಾರ್ಗೆ ಸಿಎಂ ಆಗುವ ಅರ್ಹತೆ ಇದೆ ಎಂದೂ ಅವರು ಹೇಳಿದರು.
ಸಿದ್ದರಾಮಯ್ಯ ಹೇಳಿದ್ದೇನು?
ಡಿಕೆ ಶಿವಕುಮಾರ್ಗೆ ಸಿಎಂ ಸ್ಥಾನ ಕೊಡಬೇಕೆಂಬ ಶ್ರೀಗಳ ಮನವಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಎಲ್ಲವನ್ನೂ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡಲಿದೆ. ಹೈಕಮಾಂಡ್ ತೀರ್ಮಾನದಂತೆ ನಾವು ನಡೆದುಕೊಳ್ಳುತ್ತೇವೆ ಎಂದರು.
ಇನ್ನು ಶ್ರೀಗಳ ಮನವಿ ಬಗ್ಗೆ ಪ್ರತಿಕ್ರಿಯೆ ನೀಡಲು ಡಿಸಿಎಂ ಡಿಕೆ ಶಿವಕುಮಾರ್ ನಿರಾಕರಿಸಿದ್ದಾರೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.