ಉಡುಪಿ: ಉಡುಪಿ ತಾಲೂಕಿನ ನೇಜಾರು ಸಮೀಪದ ತೃಪ್ತಿನಗರದಲ್ಲಿ 2023 ನವೆಂಬರ್ 12 ರಂದು ಗಗನಸಖಿ ಸೇರಿ ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ದಾರುಣ ಘಟನೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಜಾಮೀನು ಅರ್ಜಿಯನ್ನು ವಜಾಗೊಳಿಸಿ ನ್ಯಾಯಮೂರ್ತಿ ಎಂ.ಜಿ ಉಮಾ ಅವರಿದ್ದ ಹೈಕೋರ್ಟ್ ಪೀಠ ಆದೇಶಿಸಿದೆ.
ಮಲ್ಪೆ ಠಾಣೆಯ ನೇಜಾರು ಎಂಬಲ್ಲಿ ಒಂದೇ ಕುಟುಂಬದವರಾದ ಐನಾಜ್, ಹಸೀನಾ, ಅಫ್ನಾನ್ ಹಾಗೂ ಅಸೀಮ್ ಎಂಬುವರರನ್ನ ಹತ್ಯೆ ನಡೆಸಿದ್ದ. ಈ ಕುರಿತು ಸಾಂದರ್ಭಿಕ ಸಾಕ್ಷಿ, ಸಿಸಿಟಿವಿ ದೃಶ್ಯ, ಆರೋಪಿ ಕೂದಲಿನ DNA ಆಧರಿಸಿ ಹೆಚ್ಚುವರಿ ಎಸ್ಪಿಪಿ ಬಿ.ಎನ್.ಜಗದೀಶ್ ಅವರು ಇಂದು(ಗುರುವಾರ) ವಾದ ಮಂಡಿಸಿದ್ದರು. ಅದರಂತೆ ಬರ್ಬರ ಹತ್ಯೆ ಆರೋಪಿಯ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಇನ್ನು ಈ ಪ್ರಕರಣದ ಕುರಿತು ಅಂದು ಮಾತನಾಡಿದ್ದ ಎಸ್ಪಿ ಡಾ.ಅರುಣ್, ‘ ನಾಲ್ವರ ಹತ್ಯೆಯನ್ನು ಮಾಡಿರುವುದಾಗಿ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಒಪ್ಪಿಕೊಂಡಿದ್ದಾನೆ.. ಮೇಲ್ನೋಟಕ್ಕೆ ಹತ್ಯೆಗೆ ಮೂರ್ನಾಲ್ಕು ಕಾರಣಗಳು ಇರುವ ಸಾಧ್ಯತೆಯಿದೆ. ಸಂಪೂರ್ಣ ತನಿಖೆ ಮಾಡದೆ ಕಾರಣ ಏನು ಹೇಳಲು ಸಾಧ್ಯವಿಲ್ಲ. ಆರೋಪಿ ತಪ್ಪೊಪ್ಪಿಗೆ ಹೇಳಿಕೆ ಕೊಟ್ಟಿದ್ದಾನೆ. ಅವನ ಉದ್ದೇಶ ಆಯ್ನಾಸ್ ಕೊಲೆ ಮಾಡುವುದಾಗಿತ್ತು. ಆದರೆ, ಈ ವೇಳೆ ಆರೋಪಿ ತಪ್ಪಿಸಿಕೊಳ್ಳಲು ಮತ್ತು ಸಾಕ್ಷಿ ನಾಶ ಮಾಡಲು ಉಳಿದವರನ್ನು ಕೊಲೆ ಮಾಡಿರುವ ಬಗ್ಗೆಯೋ ಒಪ್ಪಿಕೊಂಡಿದ್ದಾನೆ ಎಂದಿದ್ದರು.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.