ಬೆಂಗಳೂರು: ಹೆಚ್ಚುವರಿ ಡಿಸಿಎಂ ಬಗ್ಗೆ ಯಾರೂ ಮಾತನಾಡುವಂತಿಲ್ಲ. ಒಂದು ವೇಳೆ ಮಾತನಾಡಿದರೆ ಅಂಥವರಿಗೆ ನೋಟಿಸ್ ನೀಡಲಾಗುವುದು. ಬಾಯಿಗೆ ಬೀಗ ಹಾಕೊಂಡು ತೆಪ್ಪಗೆ ಇರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾವ ಡಿಸಿಎಂ ಚರ್ಚೆಯೂ ಇಲ್ಲ, ಸಿಎಂ ಪ್ರಶ್ನೆಯೂ ಇಲ್ಲ. ಯಾರ ಶಿಫಾರಸು ಸಹ ಅವಶ್ಯಕತೆ ಇಲ್ಲ. ನಾನು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಯಾವ ಶಾಸಕರು ಕೂಡ ಮಾತನಾಡುವ ಅವಶ್ಯಕತೆ ಇಲ್ಲ. ಒಂದು ವೇಳೆ ಮಾತನಾಡಿದರೆ, ಎಐಸಿಸಿ ಹಾಗೂ ನಾನು ವಿಧಿಯಿಲ್ಲದೇ ನೊಟೀಸ್ ನೀಡಬೇಕಾಗುತ್ತದೆ. ಪಕ್ಷದ ಶಿಸ್ತು ಕಾಪಾಡಲು ಅನಿವಾರ್ಯವಾಗಿ ನೋಟಿಸ್ ನೀಡುತ್ತೇವೆ ಎಂದು ಹೇಳಿದ್ದಾರೆ.
ಪಕ್ಷ ಕಟ್ಟಲು ಬಹಳ ಕಷ್ಟಪಟ್ಟಿದ್ದೇವೆ. ಪಕ್ಷವನ್ನು ಅಧಿಕಾರಕ್ಕೆ ತರಲು ಎಷ್ಟು ಕಷ್ಟಪಟ್ಟಿದ್ದೇವೆ ಎಂಬುದು ನಮಗೇ ಗೊತ್ತು. ಪಕ್ಷದ ಹಿತದೃಷ್ಟಿಯಿಂದ ಬಾಯಿಗೆ ಬೀಗ ಹಾಕಿಕೊಂಡಿದ್ದರೆ ಒಳ್ಳೆಯದು. ಯಾವ ಸ್ವಾಮೀಜಿಗಳೂ ಮಾತಾಡಿಲ್ಲ. ಎಲ್ಲರಿಗೂ ಕೈ ಮುಗಿಯುತ್ತೇನೆ. ನಮ್ಮ ರಾಜಕಾರಣದ ಸುದ್ದಿಗೆ ನೀವು ಬರಬೇಡಿ. ಸ್ವಾಮೀಜಿ ನನ್ನ ಮೇಲಿನ ಅಭಿಮಾನದಿಂದ ಮಾತಾಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.