ಬೆಂಗಳೂರು: ಜಾಮೀನು ಪಡೆಯುವ ವೇಳೆ ನಕಲಿ ಶ್ಯೂರಿಟಿ ಸಲ್ಲಿಸಿ ನ್ಯಾಯಾಲಯಕ್ಕೆ ಮೋಸ ಮಾಡಿರುವುದು ದಾಖಲೆ ಪರಿಶೀಲನೆ ವೇಳೆ ತಿಳಿದ್ದಿದ್ದು, ಆರೋಪಿಗಳ ವಿರುದ್ಧ ಸಿಸಿಬಿಯಲ್ಲಿ ಎಫ್ಐಆರ್ ದಾಖಲಾಗಿದೆ.
2021ರಲ್ಲಿ ಕಾಡುಗೋಡಿ ಪೊಲೀಸರು ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆಯಡಿ ಆದಿತ್ಯಮ್ ಎಂಬುವುನನ್ನು ಬಂಧಿಸಿದ್ದರು. ಆರೋಪಿಗೆ ನ್ಯಾಯಾಲಯ ಜಾಮೀನು ನೀಡಿತ್ತು. ಆರೋಪಿ ಆದಿತ್ಯಮ್ ಕಡೆಯವರು ಜಾಮೀನಿಗಾಗಿ ನ್ಯಾಯಾಲಯಕ್ಕೆ ನಕಲಿ ಶ್ಯೂರಿಟಿ ಸಲ್ಲಿಸಿದ್ದರು.
ಚಿಕ್ಕಬಳ್ಳಾಪುರ ಮೂಲದ ಓರ್ವ ರೈತರ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್, ನಕಲಿ ಜಮೀನು ದಾಖಲೆಗಳನ್ನು ಸೃಷ್ಟಿಸಿದ್ದರು. ನಕಲಿ ದಾಖಲೆಗಳಲ್ಲದೆ ಈತನೇ ಜಮೀನು ಮಾಲಿಕ ಅಂತ ನಕಲಿ ವ್ಯಕ್ತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವಿಚಾರ ತಿಳಿದ ಚಿಕ್ಕಬಳ್ಳಾಪುರ ಮೂಲದ ರೈತ ಸಿಸಿಬಿಗೆ ದೂರು ನೀಡಿದ್ದರು. ಪೊಲೀಸರ ತಪಾಸಣೆ ವೇಳೆ ದಾಖಲೆ ಪತ್ರಗಳು ನಕಲಿ ಎಂದು ತಿಳಿದು ಬಂತು. ಸದ್ಯ ಸಿಸಿಬಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದೇ ರೀತಿ ನಿವೃತ ಎಎಸ್ಐ ಅಧಿಕಾರಿಯ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನ್ಯಾಯಾಲಯಕ್ಕೆ ಶ್ಯೂರಿಟಿ ಸಲ್ಲಿಸಲಾಗಿತ್ತು. ಸಿದ್ದಾಪುರ ಪೊಲೀಸರು ಫೋಕ್ಸೋ ಪ್ರಕರಣದಲ್ಲಿ ನವೀದ್ ಪಾಷ ಎಂಬಾತನನ್ನು ಬಂಧಿಸಿದ್ದರು. ಆರೋಪಿ ಕಡೆಯವರು ಜಾಮೀನು ವೇಳೆ ನಕಲಿ ಶ್ಯೂರಿಟಿ ಸಲ್ಲಿಸಿದ್ದರು. ನಿವೃತ್ತ ಎಎಸ್ಐ ಅಧಿಕಾರಿ ಹೆಸರಿನ ನಕಲಿ ಆಧಾರ್ ಕಾರ್ಡ್, ಜಮೀನು ದಾಖಲೆಗಳನ್ನು ಸೃಷ್ಟಿಸಿ ನ್ಯಾಯಾಲಯಕ್ಕೆ ಶ್ಯೂರಿಟಿ ಸಲ್ಲಿಸಿದ್ದರು. ಪೊಲೀಸ ತಪಾಸಣೆ ನಡೆಸಿದಾಗ ನಕಲಿ ದಾಖಲೆಗಳನ್ನು ಸಲ್ಲಿಸಿರುವುದು ಬಯಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.