ಬೆಂಗಳೂರು: ಬೆಲೆ ಏರಿಕೆ ಮಾಡಿ ಲೂಟಿ ಹೊಡೆಯುತ್ತಿರುವ ಸರಕಾರದ ಬಳಿ ಡೆಂಗ್ಯೂ ನಿಯಂತ್ರಣ, ಸ್ವಚ್ಛತೆ ಕಾಪಾಡಲು ದುಡ್ಡಿಲ್ಲ. ಹಗರಣಗಳು ಸರಕಾರಕ್ಕೆ ಕಂಟಕವಾಗಿವೆ. ಈ ಸರಕಾರ ಐಸಿಯುನಲ್ಲಿದೆ. ಬಹಳ ದಿನ ಉಳಿಯುವುದಿಲ್ಲ. ಸರಕಾರ ಬೇಗ ತೊಲಗಲಿ ಎಂದು ಜನ ಕಾಯುತ್ತಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಅಸಮಾಧಾನ ವ್ಯಕ್ತಪಡಿಸಿದರು.
ರವಿವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಡೆಂಗ್ಯೂ ಜ್ವರ ಬಂದು ಪ್ರತಿನಿತ್ಯ ಜನ ಸಾಯುತ್ತಿದ್ದಾರೆ. ತುಮಕೂರಿನಲ್ಲಿ ಕಾಲರಾದಿಂದ ಮೃತಪಟ್ಟಿದ್ದಾರೆ. ಹಲವಾರು ಕಾಯಿಲೆಗಳು ಜನರ ಪ್ರಾಣ ತೆಗೆದುಕೊಳ್ಳುತ್ತಿದೆ. ಬೆಲೆ ಏರಿಕೆ ಮಾಡಲು ಇವರ ಬಳಿ ಐಡಿಯಾಗಳಿವೆ. ರಕ್ತ ಪರೀಕ್ಷೆ ಮಾಡಲು 600-800 ರೂ. ಆಗುತ್ತದೆ. ಅದನ್ನು ಕೊಡುವ ಯೋಗ್ಯತೆ ಇಲ್ಲ ಎಂದು ಕಿಡಿಕಾರಿದರು.
ಡೆಂಗ್ಯೂ ನಿಯಂತ್ರಣಕ್ಕೆ ಕಾರ್ಯಪಡೆ ಮಾಡಿಲ್ಲ, ವಿಶೇಷ ವಾರ್ಡ್ ಇಲ್ಲ, ಸ್ವತ್ಛತೆಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಉಚಿತ ಪರೀಕ್ಷೆ, ಚಿಕಿತ್ಸೆ, ಔಷಧ ಇಲ್ಲ. ಇದನ್ನೆಲ್ಲಾ ನೋಡುತ್ತಿದ್ದರೆ ರಾಜ್ಯ ಸರಕಾರ ಐಸಿಯುನಲ್ಲಿದೆ. ಮೂಡಾ ಹಗರಣ, ವಾಲ್ಮೀಕಿ ನಿಗಮದ ಹಗರಣಗಳು ಸರಕಾರಕ್ಕೆ ಕಂಟಕವಾಗಿವೆ. ಈ ಸರಕಾರ ಬಹಳ ದಿನ ಉಳಿಯುವುದಿಲ್ಲ ಎಂದರು.
ರಾಜ್ಯದಲ್ಲಿ ದಿನನಿತ್ಯ ಬೆಲೆ ಏರಿಕೆಯಿಂದ ಬಡವರು ಬದುಕುವಂತಹ ಸ್ಥಿತಿಯಲ್ಲೇ ಇಲ್ಲ. ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದ ತರಕಾರಿಯಿಂದ ಹಿಡಿದು ಪ್ರತಿಯೊಂದರ ದರ ಏರಿಕೆ ಆಗಿದೆ. ಹಾಲಿನ ದರವನ್ನೂ ಜಾಸ್ತಿ ಮಾಡಿದ್ದಾರೆ. ಸದ್ಯದಲ್ಲೇ ಅಬಕಾರಿ ದರ ಮತ್ತು ಬಸ್ ಪ್ರಯಾಣ ದರ ಹೆಚ್ಚಿಸುವುದಕ್ಕೂ ಯೋಜನೆ ಸಿದ್ಧ ಮಾಡಿಕೊಟ್ಟುಕೊಂಡಿದ್ದಾರೆ ಎಂದು ಅಶೋಕ್ ಹೇಳಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.