ಶ್ರೀಲಂಕಾ ತಂಡದ ನೂತನ ಕೋಚ್ ಆಗಿ ಮಾಜಿ ಆಟಗಾರ ಸನತ್ ಜಯಸೂರ್ಯ ನೇಮಕವಾಗಲಿದ್ದಾರೆ.
ಈ ಹಿಂದೆ ಮುಖ್ಯ ತರಬೇತುದಾರರಾಗಿ ಕಾರ್ಯ ನಿರ್ವಹಿಸಿದ್ದ ಕ್ರಿಸ್ ಸಿಲ್ವರ್ವುಡ್ ಟಿ20 ವಿಶ್ವಕಪ್ನಲ್ಲಿನ ಹೀನಾಯ ಸೋಲಿನ ಬೆನ್ನಲ್ಲೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇದೀಗ ಅವರಿಂದ ತೆರವಾದ ಸ್ಥಾನಕ್ಕೆ ಶ್ರೀಲಂಕಾ ತಂಡದ ಮಾಜಿ ಆಲ್ರೌಂಡರ್ ಸನತ್ ಜಯಸೂರ್ಯ ಅವರನ್ನು ಆಯ್ಕೆ ಮಾಡಲು ಶ್ರೀಲಂಕಾ ಕ್ರಿಕೆಟ್ ಮಂಡಳಿ ಮುಂದಾಗಿದೆ.
ಈ ಬಗ್ಗೆ ಮಾತನಾಡಿರುವ ಸನತ್ ಜಯಸೂರ್ಯ, ಶ್ರೀಲಂಕಾ ತಂಡದ ಕೋಚ್ ಹುದ್ದೆಯನ್ನು ಅಲಂಕರಿಸುವಂತೆ ಮಂಡಳಿ ನನ್ನಲ್ಲಿ ಕೇಳಿಕೊಂಡಿದೆ. ಈ ಮನವಿಯನ್ನು ನಾನು ಸಂತೋಷದಿಂದಲೇ ಸ್ವೀಕರಿಸಿದ್ದು, ಅದರಂತೆ ಮುಂಬರುವ ಸರಣಿಗಳಲ್ಲಿ ಶ್ರೀಲಂಕಾ ತಂಡದ ಮುಖ್ಯ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದೇನೆ ಎಂದು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಸನತ್ ಜಯಸೂರ್ಯ ಶ್ರೀಲಂಕಾ ಕ್ರಿಕೆಟ್ ಮಂಡಳಿಯಲ್ಲಿ ಮುಖ್ಯ ಆಯ್ಕೆಗಾರರಾಗಿ ಕಾರ್ಯ ನಿರ್ವಹಿಸಿದ್ದರು. ಇದೀಗ ಲಂಕಾ ತಂಡದ ತರಬೇತುದಾರನಾಗಿ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.
ಭಾರತದ ವಿರುದ್ಧ ಹೊಸ ಇನಿಂಗ್ಸ್:
ಝಿಂಬಾಬ್ವೆ ಪ್ರವಾಸದ ಬಳಿಕ ಭಾರತ ತಂಡವು ಶ್ರೀಲಂಕಾ ವಿರುದ್ಧ ಸರಣಿ ಆಡಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಒಟ್ಟು 6 ಪಂದ್ಯಗಳನ್ನಾಡಲಿದೆ. ಇದೇ ವೇಳೆ ಸನತ್ ಜಯಸೂರ್ಯ ಶ್ರೀಲಂಕಾ ತಂಡದ ಕೋಚ್ ಆಗಿ ಇನಿಂಗ್ಸ್ ಆರಂಭಿಸಲಿದ್ದಾರೆ.
ಇನ್ನು ಭಾರತ ಮತ್ತು ಶ್ರೀಲಂಕಾ ನಡುವಣ ಸರಣಿಯ ದಿನಾಂಕ ಇನ್ನೂ ಕೂಡ ನಿಗದಿ ಮಾಡಲಾಗಿಲ್ಲ. ಇದಾಗ್ಯೂ ಜುಲೈ 27 ರಿಂದ ಆಗಸ್ಟ್ 7 ರ ನಡುವೆ ಉಭಯ ತಂಡಗಳು 3 ಟಿ20 ಮತ್ತು 3 ಏಕದಿನ ಪಂದ್ಯಗಳನ್ನಾಡಲಿದೆ ಎಂದು ತಿಳಿದು ಬಂದಿದೆ.
ಸನತ್ ಜಯಸೂರ್ಯ ವೃತ್ತಿಜೀವನ:
ಶ್ರೀಲಂಕಾ ಪರ 110 ಟೆಸ್ಟ್ ಪಂದ್ಯಗಳನ್ನಾಡಿರುವ ಸನತ್ ಜಯಸೂರ್ಯ ಒಟ್ಟು 6973 ರನ್ ಕಲೆಹಾಕಿದ್ದಾರೆ. ಈ ವೇಳೆ 3 ದ್ವಿಶತಕ, 31 ಅರ್ಧಶತಕ ಹಾಗೂ 14 ಶತಕಗಳನ್ನು ಸಿಡಿಸಿದ್ದಾರೆ.
ಹಾಗೆಯೇ 445 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಎಡಗೈ ದಾಂಡಿಗ, 28 ಶತಕ ಹಾಗೂ 68 ಅರ್ಧಶತಕಗಳೊಂದಿಗೆ ಒಟ್ಟು 13430 ರನ್ ಕಲೆಹಾಕಿದ್ದಾರೆ.
ಇನ್ನು ಲಂಕಾ ಪರ 31 ಟಿ20 ಪಂದ್ಯಗಳಲ್ಲಿ ಕಾಣಿಸಿಕೊಂಡಿರುವ ಸನತ್ ಜಯಸೂರ್ಯ 4 ಅರ್ಧಶತಕಗಳೊಂದಿಗೆ 629 ರನ್ ಗಳಿಸಿದ್ದಾರೆ. ಇನ್ನು ಟೆಸ್ಟ್, ಏಕದಿನ ಮತ್ತು ಟಿ20 ಕ್ರಿಕೆಟ್ನಲ್ಲಿ ಕ್ರಮವಾಗಿ 98, 323 ಮತ್ತು 19 ವಿಕೆಟ್ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಶ್ರೀಲಂಕಾ ತಂಡ ಕಂಡ ಅತ್ಯಂತ ಶ್ರೇಷ್ಠ ಆಲ್ರೌಂಡರ್ ಆಗಿ ಗುರುತಿಸಿಕೊಂಡಿದ್ದಾರೆ.
ಇದೀಗ ಸತತ ಸೋಲಿನಿಂದ ಕಂಗೆಟ್ಟಿರುವ ಶ್ರೀಲಂಕಾ ತಂಡಕ್ಕೆ ಲೆಜೆಂಡ್ ಸನತ್ ಜಯಸೂರ್ಯ ಮುಖ್ಯ ಕೋಚ್ ಆಗಿ ನೇಮಕವಾಗುತ್ತಿರುವುದು ಹೊಸ ನಿರೀಕ್ಷೆಯನ್ನು ಹುಟ್ಟುಹಾಕಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.