ದಾವಣಗೆರೆ: ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರ ಮಗಳ ಗಂಡ ಪ್ರತಾಪ್ ಕುಮಾರ್ ನಿಗೂಢವಾಗಿ ಸಾವನ್ನಪ್ಪಿದ್ದು, ಕಾರಿನಲ್ಲಿ ವಿಷ ಸೇವಿಸಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಯಾವಾಗಲೂ ಲವಲವಿಕೆಯಿಂದ ಮಾವನ ರಾಜಕೀಯ ವ್ಯವಹಾರ ನೋಡಿಕೊಳ್ಳುತ್ತಿದ್ದವ ಹೀಗೆ ಸಾವನ್ನಪ್ಪಿರುವುದು ಬಿ.ಸಿ. ಪಾಟೀಲ ಕುಟುಂಬಕ್ಕೆ ಆಘಾತ ತಂದಿದೆ. ಇದೊಂದು ಆತ್ಮಹತ್ಯೆ ಪ್ರಕರಣ ಎನ್ನಲಾಗಿದ್ದು ಮೃತ ಪ್ರತಾಪ ಕುಮಾರ್ ಸಹೋದರ ಪ್ರಭುದೇವ ಅವರು ಈ ಪ್ರಕರಣ ಸಂಬಂಧ ದಾವಣಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇದೊಂದು ಅಸಹಜ ಸಾವು ಎಂದು ದಾವಣಗೆರೆ ಜಿಲ್ಲೆ ಹೊನ್ನಾಳಿ ಠಾಣೆಗೆ ಪ್ರಭುದೇವ ಅವರು ದೂರು ಸಲ್ಲಿಸಿದ್ದಾರೆ. ಮದುವೆ ಆಗಿ 16 ವರ್ಷವಾಗಿತ್ತು, ಮಕ್ಕಳಾಗಿರಲಿಲ್ಲ ಎಂದು ಪ್ರತಾಪ್ ತೀವ್ರ ಬೇಸರದಲ್ಲಿದ್ದ. ಮಂಕಾಗಿ ತೀವ್ರ ಕಿನ್ನತೆಗೆ ಒಳಗಾಗಿದ್ದ ಎಂದು ಮೃತ ಪ್ರತಾಪ ಕುಮಾರ್ ಸಹೋದರ ಪ್ರಭುದೇವ ಅವರು ದೂರು ದಾಖಲಿಸಿದ್ದಾರೆ.
ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ಆತ್ಮಹತ್ಯೆ
ಹಾವೇರಿಯ ಪ್ರಭಾವಿ ರಾಜಕಾರಣಿ, ಮಾಜಿ ಸಚಿವ ಬಿ.ಸಿ.ಪಾಟೀಲ್ ಅವ್ರ ಅಳಿಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಿಸಿ.ಪಾಟೀಲ್ ಮೊದಲ ಪುತ್ರಿ ಸೌಮ್ಯ ಪತಿ ಪ್ರತಾಪ್ ಕುಮಾರ್ ಕಾರಿನಲ್ಲೇ ಸೂಸೈಡ್ ಮಾಡ್ಕೊಂಡಿದ್ದಾರೆ. ನಿನ್ನೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದ ಬಳಿ ಘಟನೆ ನಡೆದಿದೆ. ಅರಣ್ಯದ ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಒಳಗೆ ವಿಷದ ಬಾಟಲ್ ಪತ್ತೆಯಾಗಿದೆ. ಸ್ಥಳಕ್ಕೆ ಬಂದ ಪೊಲೀಸ್ರು ಮೆಗ್ಗಾನ್ ಆಸ್ಪತ್ರೆಗೆ ಮೃತದೇಹ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಿದ್ದು ಇಂದು ಅಂತ್ಯಸಂಸ್ಕಾರ ನಡೆಯಲಿದೆ. ವೀರಶೈವ ಲಿಂಗಾಯತ ಸಂಪ್ರದಾಯದಂತೆ ಸ್ವಗ್ರಾಮ ಕತ್ತಲಗೆರೆ ಗ್ರಾಮದಲ್ಲಿ ಇಂದು ಪ್ರತಾಪ್ ಅಂತ್ಯಸಂಸ್ಕಾರ ನಡೆಯಲಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.