ಮನೆ ಅಪರಾಧ ಪೊಲೀಸ್ ಸಿಬ್ಬಂದಿ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನ: ಕಾಲಿಗೆ ಗುಂಡು ಹೊಡೆದು ಆರೋಪಿ ಸೆರೆ

ಪೊಲೀಸ್ ಸಿಬ್ಬಂದಿ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನ: ಕಾಲಿಗೆ ಗುಂಡು ಹೊಡೆದು ಆರೋಪಿ ಸೆರೆ

0

ಶಿವಮೊಗ್ಗ: 5 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ಚಾಕುವಿನಿಂದ ದಾಳಿ ನಡೆಸಿದ ಹಿನ್ನೆಲೆ ಕಾಲಿಗೆ ಗುಂಡು ಹೊಡೆದು ಸೆರೆ ಹಿಡಿಯಲಾಗಿದೆ.

Join Our Whatsapp Group

ವಿನೋಬನಗರ ಪೊಲೀಸ್ ಠಾಣೆಯಲ್ಲಿ ರಜಾಕ್ ವಿರುದ್ಧ ಕೊಲೆ ಯತ್ನ ಹಾಗೂ ಗಾಂಜಾ ಮಾರಾಟ ಸೇರಿ 5 ಪ್ರಕರಣಗಳಿದ್ದವು.

ಆರೋಪಿಯ ಸ್ಥಳ ಪತ್ತೆ ಹಚ್ಚಿ ಹೊಳೆಹೊನ್ನೂರು ಪೊಲೀಸ್ ಠಾಣೆ ಪಿಐ ಲಕ್ಷ್ಮಿಪತಿ ನೇತೃತ್ವದಲ್ಲಿ ಬಂಧಿಸಲು ತೆರಳಲಾಗಿತ್ತು.

ಈ ವೇಳೆ ಆತ ಪೊಲೀಸ್ ಕಾನ್ಸ್‌ಟೇಬಲ್ ಅರ್ಜುನ್ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ. ಎಷ್ಟೇ ಹೇಳಿದರೂ ಸರೆಂಡರ್ ಆಗದ ಹಿನ್ನೆಲೆ ಪಿಐ ಲಕ್ಷ್ಮಿಪತಿ ಕಾಲಿಗೆ ಗುಂಡು ಹೊಡೆದು ಸೆರೆ ಹಿಡಿದರು.

ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಕ್ಯಾತನಹಳ್ಳಿ ಫಾರೆಸ್ಟ್  ಬಳಿ ಈ ಘಟನೆ ನಡೆದಿದೆ‌.