ಮನೆ ಅಪರಾಧ ಪ್ರೀತಿಗೆ ವಿರೋಧ; ತಂದೆ-ತಾಯಿ ಹಾಗೂ ಸಹೋದರನನ್ನು ಕೊಂದ 15 ರ ಬಾಲಕ

ಪ್ರೀತಿಗೆ ವಿರೋಧ; ತಂದೆ-ತಾಯಿ ಹಾಗೂ ಸಹೋದರನನ್ನು ಕೊಂದ 15 ರ ಬಾಲಕ

0

ವಾರಣಾಸಿ: ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದ ಹುಡುಗಿಯ ಜೊತೆ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ತಂದೆ-ತಾಯಿ ಹಾಗೂ ಸಹೋದರನನ್ನು ಬರ್ಬರವಾಗಿ ಕೊಂದಿರುವುದಾಗಿ ಒಪ್ಪಿಕೊಂಡ 15 ವರ್ಷದ ಬಾಲಕನನ್ನು ಗಾಜಿಪುರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

Join Our Whatsapp Group

ಜುಲೈ 7 ಮತ್ತು 8 ರ ಮಧ್ಯರಾತ್ರಿ ಘಾಜಿಪುರ ಜಿಲ್ಲೆಯ ನಂದಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಸುಮ್ಹಿಕಲಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಬಾಲಾಪರಾಧಿಯನ್ನು ಬಂಧಿಸಲಾಗಿದ್ದು, ಆತನ ತಂದೆ ಮುನ್ಷಿ ಬಿಂದ್ (45), ತಾಯಿ ದೇವಂತಿ ಬಿಂದ್(40) ಮತ್ತು ಸಹೋದರನ ಕತ್ತು ಸೀಳಲು ಬಳಸಿದ್ದ ಹರಿತವಾದ ಆಯುಧವನ್ನು ವಶಪಡಿಸಿಕೊಂಡಿರುವುದಾಗಿ ಎಂದು ಗಾಜಿಪುರ ಎಸ್ಪಿ ಓಂವಿರ್ ಸಿಂಗ್ ಮಂಗಳವಾರ ತಿಳಿಸಿದ್ದಾರೆ.

ಹಲವು ದಿನಗಳ ಹಿಂದೆ ಮೂವರನ್ನು ಕೊಲ್ಲಲು ನಿರ್ಧರಿಸಿದ್ದೆ, ಆದರೆ ಸಾಧ್ಯವಾಗಲಿಲ್ಲಎಂದು ಬಾಲಕ ಪೊಲೀಸರಿಗೆ ತಿಳಿಸಿದ್ದಾನೆ. ಭಾನುವಾರ ರಾತ್ರಿ, ಕುಟುಂಬದ ಸದಸ್ಯರೆಲ್ಲರೂ ಮಲಗಿದ್ದಾಗ ಮದ್ಯ ಸೇವಿಸಿ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಬಂದ ಬಾಲಕ ತಂದೆ, ತಾಯಿ ಹಾಗೂ ಸಹೋದರನ ಕತ್ತು ಸೀಳಿದ್ದಾನೆ. ಅಪರಾಧ ಮಾಡಿದ ನಂತರ, ಮನೆಯಿಂದ ಸ್ವಲ್ಪ ದೂರದಲ್ಲಿರುವ ಹೊಲದಲ್ಲಿ ಚಾಕುವನ್ನು ಬಚ್ಚಿಟ್ಟು ಹತ್ತಿರದ ಆರ್ಕೆಸ್ಟ್ರಾ ಪ್ರದರ್ಶನವನ್ನು ನೋಡಲು ಹೋಗಿದ್ದಾನೆ. ಬಳಿಕ ಬೆಳಗಿನ ಜಾವ 1.45 ರ ಸುಮಾರಿಗೆ ಮನೆಗೆ ಹಿಂದಿರುಗಿದ ಬಾಲಕ ಮನೆಯವರನ್ನು ಯಾರೋ ಕೊಂದು ಹೋಗಿರುವುದಾಗಿ ಗ್ರಾಮಸ್ಥರಿಗೆ ಕರೆ ಮಾಡಿ ತಿಳಿಸಿದ್ದಾನೆ.

ಬಳಿಕ ಪೊಲೀಸ್​​ ವಿಚಾರಣೆ ವೇಳೆ ಬಾಲಕ ತನ್ನ ತಪ್ಪನ್ನು ಒಪ್ಪಿಕೊಂಡಿರುವುದಾಗಿ ತಿಳಿದುಬಂದಿದೆ.