ಚಿತ್ತಾಪುರ; ತಾಲೂಕಿನ ಕಮರವಾಡಿ ಗ್ರಾಮದಲ್ಲಿ ಕಳೆದ ವಾರ ಹಾಡುಹಗಲೇ ಮನೆಯ ಮೇಲ್ಛಾವಣಿ ತೆಗೆದು ಕಳ್ಳತನ ಮಾಡಿದ ಆರೋಪಿಯನ್ನು ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಮರವಾಡಿಯ ಶಿವಬಸಪ್ಪ ಅಮಕರ್ ಎಂಬುವನನ್ನು ಬಂಧಿಸಿ ಕಳುವಾದ ಚಿನ್ನ ಸಮೇತ ವಸ್ತುಗಳು ಪೋಲಿಸರು ವಶಪಡಿಸಿಕೊಂಡಿದ್ದಾರೆ.
ಕಳೆದ ಜೂನ್ 28ರಂದು ಗ್ರಾಮದ ಮಲ್ಲಪ್ಪ ಮಾಂಗ್ ಎಂಬವರ ಮನೆ ಕಳ್ಳತನವಾಗಿತ್ತು. ಮೇಲ್ಛಾವಣಿ ಕಿತ್ತು 45 ಗ್ರಾಂ ಚಿನ್ನ ಹಾಗೂ 5 ಸಾವಿರ ರೂ.ಗಳ ನಗದು ಕಳ್ಳರು ದೋಚಿದ್ದರು. ಪೋಲಿಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಅಪರ ಪೋಲಿಸ್ ಅಧೀಕ್ಷಕ ಎನ್ ಶ್ರೀನಿಧಿ, ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ್, ಸಿಪಿಐ ಚಂದ್ರಶೇಖರ್ ತಿಗಡಿ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ಕೈಗೊಂಡರು.
ಪಿಎಸ್ಐಗಳಾದ ಶ್ರೀಶೈಲ್ ಅಂಬಾಟಿ, ಚಂದ್ರಾಮಪ್ಪ, ಹಾಗೂ ಸಿಬ್ಬಂದಿಗಳಾದ ನಾಗೇಂದ್ರ, ಬಸವರಾಜ್, ಸವಿಕುಮಾರ್, ಅಯ್ಯಣ್ಣ, ಬಸವರಾಜ್, ಸಿದ್ದರಾಮೇಶ್, ಈರೇಶ್, ಮಂಜುನಾಥ್ ಅವರನ್ನೊಳಗೊಂಡ ತಂಡವನ್ನು ರಚಿಸಿ ಆರೋಪಿ ಕಮರವಾಡಿಯ ಶಿವಬಸಪ್ಪ ಅಮಕರ್ ಎಂಬವನನ್ನು ಬಂಧಿಸಿ ಒಟ್ಟು 1,30,000 ರೂ. ಮೌಲ್ಯದ ಚಿನ್ನದ ಆಭರಣಗಳನ್ನು ಜಪ್ತಿಪಡಿಸಿಕೊಂಡು ಆರೋಪಿತನಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.