ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿದ್ದಾರೆ. ಜುಲೈ 18ರವರೆಗೂ ನಾಗೇಂದ್ರ ಅವರನ್ನು ಇಡಿ ಕಸ್ಟಡಿಗೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸಿದ್ದಾರೆ.
ಶುಕ್ರವಾರ ಮುಂಜಾನೆ ಡಾಲರ್ಸ್ ಕಾಲೊನಿಯಲ್ಲಿರುವ ನಾಗೇಂದ್ರ ಅವರ ನಿವಾಸದಿಂದ ಅವರನ್ನು ವಶಕ್ಕೆ ಪಡೆದಿದ್ದ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ತಡರಾತ್ರಿ ನಾಗೇಂದ್ರ ಅವರನ್ನು ಕಚೇರಿಯಲ್ಲಿರಿಸಿಕೊಂಡ ಅಧಿಕಾರಿಗಳು ಇಂದು ಮುಂಜಾನೆ ಅವರನ್ನು ವೈದ್ಯಕೀಯ ತಪಾಸಣೆಗೊಳಪಡಿಸಿ ನಂತರ ಸಂಪಿಗೆಹಳ್ಳಿಯಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.
ಈ ವೇಳೆ, ಹೆಚ್ಚಿನ ವಿಚಾರಣೆಗಾಗಿ ನಾಗೇಂದ್ರ ಅವರನ್ನು 14 ದಿನಗಳ ಕಾಲ ವಶಕ್ಕೆ ನೀಡುವಂತೆ ಇಡಿ ಅಧಿಕಾರಿಗಳು ಮನವಿ ಸಲ್ಲಿಸಿದರು. ಆದರೆ ನ್ಯಾಯಾಧೀಶರು ಜುಲೈ 18ರವರೆಗೆ ನಾಗೇಂದ್ರ ಅವರನ್ನು ಇಡಿ ವಶಕ್ಕೆ ನೀಡಿ ಆದೇಶಿಸಿದ್ದಾರೆ.
ಅಕ್ರಮದಲ್ಲಿ ನನ್ನ ಪಾತ್ರವಿಲ್ಲ: ಇನ್ನು ಕಸ್ಟಡಿಗೆ ಪಡೆದ ಬಳಿಕ ಶಾಂತಿನಗರದ ಇಡಿ ಕಚೇರಿ ಬಳಿ ಕರೆತಂದಾಗ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಚಿವ ಬಿ. ನಾಗೇಂದ್ರ, ನಿಗಮದಲ್ಲಿನ ಅಕ್ರಮದಲ್ಲಿ ನನ್ನ ಪಾತ್ರವಿಲ್ಲ, ಇ.ಡಿ ಅಧಿಕಾರಿಗಳು ನನ್ನನ್ನು ಯಾಕೆ ಬಂಧಿಸಿದ್ದಾರೆ ಎಂದು ಗೊತ್ತಿಲ್ಲ. ತನಗೂ ವಾಲ್ಮೀಕಿ ನಿಗಮದ ಅಕ್ರಮಕ್ಕೂ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.