ಮನೆ ರಾಜ್ಯ ವಿಧಾನಸಭೆ ಕಲಾಪಕ್ಕೆ ಹಾಜರಾದ ಶಾಸಕ ಬಸನಗೌಡ ದದ್ದಲ್

ವಿಧಾನಸಭೆ ಕಲಾಪಕ್ಕೆ ಹಾಜರಾದ ಶಾಸಕ ಬಸನಗೌಡ ದದ್ದಲ್

0

ಬೆಂಗಳೂರು: ಜಾರಿ ನಿರ್ದೇಶನಾಲಯದಿಂದ ಬಂಧನ ಭೀತಿಯಲ್ಲಿ ಎರಡು ದಿನಗಳಿಂದ ತಲೆಮರೆಸಿಕೊಂಡಿದ್ದ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ, ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ ಅವರು ಸೋಮವಾರ ಬೆಳಿಗ್ಗೆ ಆರಂಭವಾದ ವಿಧಾನಸಭೆ ಕಲಾಪಕ್ಕೆ ಹಾಜರಾಗಿದ್ದಾರೆ.

Join Our Whatsapp Group

ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದದ್ದಲ್ ಮನೆ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ)  ಅಧಿಕಾರಿಗಳು ಬುಧವಾರ ದಾಳಿ ಮಾಡಿದ್ದರು. ಎರಡು ದಿನಗಳ ಕಾಲ ಶೋಧ, ವಿಚಾರಣೆ ನಡೆಸಲಾಗಿತ್ತು.

ಶುಕ್ರವಾರ ವಿಶೇಷ ತನಿಖಾ ದಳದ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದ ದದ್ದಲ್, ಶನಿವಾರ ಮನೆಯ ಬಾಗಿಲು ಬಂದ್ ಮಾಡಿ ನಾಪತ್ತೆಯಾಗಿದ್ದರು.

ವಿಧಾನಮಂಡಲ ಅಧಿವೇಶನದ ಅವಧಿಯಲ್ಲಿ ಶಾಸಕರನ್ನು ಬಂಧಿಸಬೇಕಾದರೆ ವಿಧಾನಸಭೆ ಅಧ್ಯಕ್ಷರ ಅನುಮತಿ ಅಗತ್ಯ. ಇಕ ರೀತಿಯ ರಕ್ಷಣೆ ಇರುವ ಕಾರಣದಿಂದ ಸದನಕ್ಕೆ ಬಂದಿದ್ದಾರೆ.

ಸದನಕ್ಕೆ ಹಾಜರಾಗುವ ಮುನ್ನ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ನಾನು ಎಲ್ಲಿಯೂ ತಲೆಮರೆಸಿಕೊಂಡಿರಲಿಲ್ಲ. ಊರಿಗೆ ಹೋಗಿದ್ದೆ. ಇ.ಡಿ ಅಧಿಕಾರಿಗಳು ನನಗೆ ಯಾವುದೇ ನೋಟಿಸ್ ನೀಡಿಲ್ಲ ಎಂದರು.