ಅತ್ಯಂತ ಹಿಂದುಳಿದ ವರ್ಗಗಳ ಪಟ್ಟಿಯಿಂದ ತಂತಿ ತತ್ವ ಸಮುದಾಯವನ್ನು ತೆಗೆದು ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಪನ್/ಸವಾಸಿ ಜಾತಿಯೊಂದಿಗೆ ವಿಲೀನಗೊಳಿಸುವ ಬಿಹಾರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ.
ಸಂವಿಧಾನದ 341ನೇ ವಿಧಿಯಡಿ ಪ್ರಕಟಿಸಲಾದ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಬದಲಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರ ಇಲ್ಲ ಎಂದು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರಿದ್ದ ಪೀಠ ಬಿಹಾರ ಸರ್ಕಾರದ ಕಿವಿಹಿಂಡಿದೆ.
ರಾಜ್ಯ ಹಿಂದುಳಿದ ಆಯೋಗದ ಶಿಫಾರಸಿನ ಮೇರೆಗೆ ತಂತಿ ತಂತ್ವಾ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಯಿಂದ ತೆಗೆದಿದ್ದಾಗಿ ರಾಜ್ಯ ಸರ್ಕಾರ ಸಮರ್ಥಿಸಿಕೊಳ್ಳಬಹುದು. ಇದರ ಹಿಂದೆ ಉತ್ತಮ, ಕೆಟ್ಟ ಅಥವಾ ಇನ್ನಾವುದೇ ಕಾರಣಗಳನ್ನು ರಾಜ್ಯ ಸರ್ಕಾರ ಆ ಸಂದರ್ಭದಲ್ಲಿ ಹೊಂದಿದ್ದರೂ ‘ಪನ್, ಸವಾಸಿ, ಪನ್ರ್’ ಸಮುದಾಯದೊಂದಿಗೆ ತಂತಿ ತಂತ್ವಾವನ್ನು ವಿಲೀನಗೊಳಿಸುವ ಕ್ರಮ ಯಾವುದೇ ದುರಾಚಾರಕ್ಕಿಂತ ಕಡಿಮೆಯಲ್ಲ. ಹೋಲಿಕೆ ಇರಲಿ ಇಲ್ಲದೇ ಇರಲಿ ಯಾವುದೇ ಜಾತಿ ಜನಾಂಗ ಅಥವಾ ಬುಡಕಟ್ಟುಗಳನ್ನು ಪರಿಶಿಷ್ಟ ಪಟ್ಟಿಗೆ ಸೇರಿಸುವ ಇಲ್ಲವೇ ಹೊರಗಿಡುವ ಕ್ರಿಯೆ ಸಂಸತ್ತಿನ ಕಾಯಿದೆಯ ಮೂಲಕವೇ ನಡೆಯಬೇಕೆ ವಿನಾ ಬೇರಾವುದೇ ವಿಧಾನದಿಂದ ಅಲ್ಲ ಎಂದು ನ್ಯಾಯಾಲಯ ಸೋಮವಾರ ನೀಡಿದ ತೀರ್ಪಿನಲ್ಲಿ ಖಚಿತವಾಗಿ ತಿಳಿಸಿದೆ.
ಈ ಹಿಂದೆ ಅತ್ಯಂತ ಹಿಂದುಳಿದ ವರ್ಗ ಎಂದು ಗುರುತಿಸಲಾಗಿದ್ದ ತಂತಿ ತತ್ವ ಸಮುದಾಯವನ್ನು ಪರಿಶಿಷ್ಟ ಜಾತಿಯ ಸೌಲಭ್ಯಗಳನ್ನು ಒದಗಿಸುವುದಕ್ಕಾಗಿ ಜುಲೈ 1, 2015ರಂದು ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ವಿಲೀನಗೊಳಿಸುವ ನಿರ್ಣಯವನ್ನು ಬಿಹಾರ ಸರ್ಕಾರ ಅಂಗೀಕರಿಸಿತು. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಶಿಫಾರಸನ್ನು ಆಧರಿಸಿ ಹೀಗೆ ಮಾಡಲಾಗಿತ್ತು. ನಿರ್ಧಾರವನ್ನು ಪಾಟ್ನಾ ಹೈಕೋರ್ಟ್ 2017 ರಲ್ಲಿ ಎತ್ತಿ ಹಿಡಿದಿತ್ತು. ಹೈಕೋರ್ಟ್ ನಿರ್ಧಾರವನ್ನು ಎರಡು ಮೇಲ್ಮನವಿಗಳ ಮೂಲಕ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲಾಗಿತ್ತು.
ತಂತಿ ತಂತ್ವಾ ಮತ್ತು ಪನ್- ಸವಾಸಿ ಸಮುದಾಯಗಳೆರಡನೂ ಸಮನಾಗಿ ಪರಿಗಣಿಸಬೇಕು ಎಂಬ ರಾಜ್ಯ ಸರ್ಕಾರದ ವಾದವನ್ನು ಒಪ್ಪದ ಸುಪ್ರೀಂ ಕೋರ್ಟ್ ಹಾಗೆ ಪರಿಶಿಷ್ಟ ಜಾತಿ ಪಟ್ಟಿಗೆ ಯಾವುದೇ ಸಮುದಾಯವನ್ನು ಸೇರಿಸಬೇಕಾದರೂ ಸಂಸತ್ತಿನ ಕಾಯಿದೆಯ ಮೂಲಕವೇ ಮಾಡಬೇಕು ಎಂದು ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜುಲೈ 2015ರಲ್ಲಿ ಕೈಗೊಂಡಿದ್ದ ನಿರ್ಣಯವನ್ನು ಅದು ಬದಿಗೆ ಸರಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.