ಮನೆ ರಾಜ್ಯ ಟಿಪ್ಪು ಕೇವಲ ಮತಾಂಧನಷ್ಟೇ ಅಲ್ಲ, ಕನ್ನಡ ದ್ವೇಷಿ ಕೂಡ: ಬಿಜೆಪಿ

ಟಿಪ್ಪು ಕೇವಲ ಮತಾಂಧನಷ್ಟೇ ಅಲ್ಲ, ಕನ್ನಡ ದ್ವೇಷಿ ಕೂಡ: ಬಿಜೆಪಿ

0

ಬೆಂಗಳೂರು (Bengaluru)- ಟಿಪ್ಪು ಕೇವಲ ಮತಾಂಧನಷ್ಟೇ ಅಲ್ಲ, ಬದಲಾಗಿ ಕನ್ನಡ ದ್ವೇಷಿ ಕೂಡ ಎಂದು ಬಿಜೆಪಿ ಕಿಡಿಕಾರಿದೆ. #ಟಿಪ್ಪುಕಾಂಗ್ರೆಸ್ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
ಟಿಪ್ಪು ಕೇವಲ ಮತಾಂಧನಷ್ಟೇ ಅಲ್ಲ, ಬದಲಾಗಿ ಕನ್ನಡ ದ್ವೇಷಿ ಕೂಡ. ಕನ್ನಡ ಅಸ್ಮಿತೆಯ ಬಗ್ಗೆ ಮಾತನಾಡುವ ಮುನ್ನ ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಇಬ್ಬಂದಿತನಕ್ಕೆ ಔಷಧಿ ಕಂಡುಕೊಳ್ಳಲಿ. ಕಂದಾಯ ದಾಖಲೆಗಳಿಂದಲೂ ಕನ್ನಡ ಅಳಿಸಿ ಪರ್ಷಿಯನ್ ಜಾರಿಗೊಳಿಸಿದ ಜಿಹಾದಿ ಮನಸ್ಥಿತಿಯ ಟಿಪ್ಪುವಿನ ಬಗ್ಗೆ ಕಾಂಗ್ರೆಸ್ಸಿಗರಿಗೆ ಯಾಕಿಷ್ಟು ಪ್ರೀತಿ? ಎಂದು ಪ್ರಶ್ನಿಸಿದೆ.


‘ಟಿಪ್ಪು ಸುಲ್ತಾನ್ ಮತಾಂಧನಲ್ಲ ಎನ್ನುವ “ಜಾಣಕುರುಡುತನ ಮತ್ತು ಜಾಣಕಿವುಡುತನ” ಕಾಂಗ್ರೆಸ್ ನಾಯಕರನ್ನು ಆವರಿಸಿಕೊಂಡಿದೆ. ಕೊಡಗಿನ ನರಮೇಧ, ಮೇಲುಕೋಟೆಯ ಮಂಡ್ಯ ಅಯ್ಯಂಗಾರರ ಹತ್ಯೆ, ನೆತ್ತರಕೆರೆಯ ಹತ್ಯಾಕಾಂಡ, ಮೈಸೂರು ಒಡೆಯರ ಮೇಲಿನ ದಾಳಿ, ದುರ್ಗದ ಪಾಳೆಯಗಾರರ ಮೇಲಿನ ದಾಳಿ – ಇವೆಲ್ಲ ಯಾವುದರ ಸಂಕೇತ?’ವೆಂದು ಪ್ರಶ್ನೆಗಳ ಸುರಿಮಳೆಗೈದಿದೆ.