ಚೆನ್ನೈ: ಕಾಲಿವುಡ್ ನಟ ಕಾರ್ತಿ ಅವರ ʼಸರ್ದಾರ್ -2ʼ ಚಿತ್ರೀಕರಣದ ಸೆಟ್ ನಲ್ಲಿ ಅವಘಡ ಸಂಭವಿಸಿ ಸ್ಟಂಟ್ ಮ್ಯಾನ್ ಮೃತಪಟ್ಟಿರುವ ಘಟನೆ ನಡೆದಿದೆ.
ಪಿಎಸ್ ಮಿತ್ರನ್ ನಿರ್ದೇಶನದ ‘ಸರ್ದಾರ್ 2’ ಸೆಟ್ನಲ್ಲಿ ಸಂಭವಿಸಿದ ಅವಘಡದಲ್ಲಿ ಎಜುಮಲೈ (54) ಎಂಬ ಸ್ಟಂಟ್ ಮ್ಯಾನ್ ಮೃತಪಟ್ಟಿರುವುದು ವರದಿಯಾಗಿದೆ.
ಜುಲೈ 15ರಂದು ಚೆನ್ನೈನ ಸಾಲಿಗ್ರಾಮಂದಲ್ಲಿರುವ ಎಲ್ ವಿ ಪ್ರಸಾದ್ ಸ್ಟುಡಿಯೋದಲ್ಲಿ ʼಸರ್ದಾರ್ -2ʼ ಚಿತ್ರೀಕರಣವನ್ನು ಆರಂಭಿಸಲಾಗಿತ್ತು. ಸಿನಿಮಾದ ಸಾಹಸ ದೃಶ್ಯವನ್ನು ಚಿತ್ರೀಕರಿಸುವ ವೇಳೆ 20 ಅಡಿಯಿಂದ ಎಜುಮಲೈ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಆದರೆ ಬುಧವಾರ(ಜು.17ರಂದು) ಮಧ್ಯರಾತ್ರಿ 1:30ರ ವೇಳೆಗೆ ತೀವ್ರ ರಕ್ತಸ್ರಾವವಾಗಿ ಅವರು ಮೃತಪಟ್ಟಿರುವುದಾಗಿ ವರದಿಯಾಗಿದೆ.
ಅಪಘಾತದ ಬಗ್ಗೆ ವಿರುಗಂಬಕ್ಕಂ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸದ್ಯ ತನಿಖೆ ನಡೆಯುತ್ತಿದೆ. ಈ ಬಗ್ಗೆ ಚಿತ್ರತಂಡ ಇನ್ನಷ್ಟೇ ಮಾಹಿತಿ ನೀಡಬೇಕಿದೆ.
ಭಾರೀ ನಿರೀಕ್ಷೆ ಹುಟ್ಟಿಸಿರುವ ಕಾರ್ತಿ ಅವರ ʼಸರ್ದಾರ್ -2ʼ ಸಿನಿಮಾದ ಮುಹೂರ್ತ ಜುಲೈ 12ರಂದು ನೆರವೇರಿತ್ತು. ಕಾರ್ತಿ ಸೇರಿದಂತೆ ಚಿತ್ರತಂಡದ ಪ್ರಮುಖರು ಭಾಗಿಯಾಗಿದ್ದರು.
2022ರಲ್ಲಿ ಬಂದ ಸ್ಪೈ ಥ್ರಿಲ್ಲರ್ ʼಸರ್ದಾರ್ʼ ಕಾಲಿವುಡ್ ನಲ್ಲಿ ಪ್ರಶಂಸೆ ಪಡೆದಿತ್ತು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.