ಹಾಸನ: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಲು ಗ್ರಾಮದ ಬಳಿ ಮತ್ತೆ ಭೂಕುಸಿತ ಉಂಟಾಗಿದೆ. ಗುರುವಾರ ಬೆಳಗಿನ ಜಾವ ಮಣ್ಣಿನಡಿ ಮಾರುತಿ ಆಮ್ನಿ ವಾಹನ ಸಿಲುಕಿದ್ದು, ಅದರಲ್ಲಿದ್ದ ಇಬ್ಬರು ಅಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ.
ಬುಧವಾರ ಮಧ್ಯಾಹ್ನವೇ ಈ ಪ್ರದೇಶದಲ್ಲಿ ಭಾರಿ ಪ್ರಮಾಣದ ಗುಡ್ಡ ಕುಸಿದಿತ್ತು. ಆಗ ಕೆಲಕಾಲ ಸಂಚಾರ ಸ್ಥಗಿತಗೊಳಿಸಿ, ಮಣ್ಣು ತೆರವು ಮಾಡಲಾಗಿತ್ತು. ನಂತರ ಮತ್ತೆ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಗುರುವಾರ ಬೆಳಗಿನ ಜಾವ ಇದ್ದಕ್ಕಿಂತೆಯೇ ನೂರು ಅಡಿಗೂ ಎತ್ತರದ ಗುಡ್ಡ ಕುಸಿದು ಬಿದ್ದಿದೆ. ರಸ್ತೆಯ ತುಂಬೆಲ್ಲ ಮಣ್ಣು ತುಂಬಿದ್ದು, ವಾಹನಗಳು ಸಂಚರಿಸದಂತಾಗಿವೆ.
ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಹಾಸನದ ಹೊರವಲಯದ ಕಂದಲಿ ಬಳಿಯೇ ವಾಹನಗಳನ್ನು ತಡೆದು ನಿಲ್ಲಿಸಲಾಗುತ್ತಿದೆ. ಸಕಲೇಶಪುರದವರೆಗೆ ಮಾತ್ರ ಸಂಚರಿಸಲು ಅವಕಾಶವಿದ್ದು, ಸಕಲೇಶಪುರದಿಂದ ಮುಂದೆ ಸಂಚಾರ ಸ್ಥಗಿತಗೊಂಡಿದೆ.
ಮಾರನಹಳ್ಳಿಯಿಂದ ದೋಣಿಗಾಲ್ವರೆಗೆ ವಾಹನಗಳ ಸಾಲುಗಟ್ಟಿ ನಿಂತಿವೆ. ಸ್ಥಳಕ್ಕೆ ಹೆದ್ದಾರಿ ಪ್ರಾಧಿಕಾರ ಹಾಗೂ ತಾಲ್ಲೂಕು ಆಡಳಿತದ ಅಧಿಕಾರಿಗಳು ಭೇಟಿ ನೀಡಿದ್ದು, ಮಣ್ಣು ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ. ರಸ್ತೆಯಲ್ಲಿ ತುಂಬಿರುವ ಮಣ್ಣು ತೆರವುಗೊಳಿಸಿದ ನಂತರ ಮತ್ತೆ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.